
ಚಾಮರಾಜನಗರ, ಮಾ.11:- ಅಂತರ್ಜಾತಿ ವಿವಾಹ ಆಗಿದ್ದಕ್ಕೆಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದು ಕೊಂಡುದಂಪತಿಗೆ ಬಹಿμÁ್ಕರ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ 12 ಮಂದಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಅಗರ – ಮಾಂಬಳ್ಳಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಖಂಡರುಗಳಾದ ವೆಂಕಟಶೆಟ್ಟಿ, ಮಹದೇವ, ಕಣ್ಣಪ್ಪ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಏನಿದು ಬಹಿμÁ್ಕರ ಪ್ರಕರಣ: ಅಂತರ್ಜಾತಿ ವಿವಾಹ ಆಗಿದ್ದಕ್ಕೆಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಯಜಮಾನರು 3 ಲಕ್ಷದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿμÁ್ಕರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿವೈಎಸ್.ಪಿ ಕಚೇರಿಗೆಗೋವಿಂದ ರಾಜು ಹಾಗೂ ಶ್ವೇತಾದೂರುಕೊಟ್ಟು ಅಳಲು ತೋಡಿಕೊಂಡಿದ್ದರು.
ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೂವಿನ ಕೊಪ್ಪಲು ಗ್ರಾಮದದಲಿ ತಜನಾಂಗಕ್ಕೆ ಸೇರಿದ ಪ್ರಕಾಶ್ಎಂಬುವರ ಮಗಳಾದ ಶ್ವೇತಾಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿಕೊಂಡಿದ್ದರು. ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತಾ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಾ, ಐದು ವರ್ಷಗಳಿಂದ ಜೀವನ ನಡೆಸುತ್ತಿದ್ದರು.
ಆದರೆ, ಗೋವಿಂದರಾಜು ಅವರ ಮನೆಯಲ್ಲಿಅಂತರ್ಜಾತಿ ವಿವಾಹ ತಿಳಿದಿದ್ದರೂ ಮನೆಯವರುಯಾರೂತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ಜಾತಿ ವಿವಾಹದ ಬಗ್ಗೆ ಮಾಹಿತಿ ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡಕಟ್ಟಬೇಕು ಎಂದು ಸೂಚಿಸಿದ್ದರು.
ದಂಡಕಟ್ಟದಿದ್ದಲ್ಲಿ ದಂಪತಿಗೆ ಅಂಗಡಿಗಳಲ್ಲಿ ಅಕ್ಕಿ, ತರಕಾರಿ, ಹಾಲು ನೀಡುವುದಿಲ್ಲ, ನೀರನ್ನು ಸಹ ತೆಗೆದುಕೊಳ್ಳುವಂತಿಲ್ಲ ಎಂದು ಮುಖಂಡರು ತೀರ್ಪು ನೀಡಿದ್ದರು. ಗ್ರಾಮದಯ ಜಮಾನರಾದ ವೆಂಕಟಶೆಟ್ಟಿ, ಮಹದೇವ, ಮೊಂಡಶೆಟ್ಟಿ, ಕಣ್ಣಪ್ಪ, ನಂಜಶೆಟ್ಟಿ, ಮಹದೇವಶೆಟ್ಟಿ, ಸಿದ್ದೇಶ್, ಪಂಚಾಯಿತಿ ಮಾಡಿ ನೀವು ತಪ್ಪು ಮಾಡಿದ್ದೀರಾ ಆ ಕಾರಣ 3 ಲಕ್ಷದಂಡ ಕಟ್ಟಬೇಕು ಎಂದು ಕಳೆದ ಮಾರ್ಚಿ 1 ರಂದು ಕೊನೆಯ ದಿನಾಂಕ ನೀಡಿದ್ದರು.
ದೂರು ನೀಡಿದ್ದಕ್ಕೆ ಮತ್ತೆ ದಂಡ: ನೀವು ದಂಡಕಟ್ಟಿದರು ಸಹ ನಿಮ್ಮ ಸೊಸೆ, ಮಗ ಗ್ರಾಮಕ್ಕೆ ಪ್ರವೇಶ ಮಾಡುವಂತಿಲ್ಲ. ನೀವು ಅವರಜೊತೆ ಮಾತನಾಡುವಂತಿಲ್ಲ. ಈಗ 3 ಲಕ್ಷಕಟ್ಟಿದರೆ ಗ್ರಾಮದವರು ಎಂದಿನಂತೆ ನಿಮ್ಮನ್ನು ಮಾತನಾಡಿಸುತ್ತಾರೆಎಂದು ಬಹಿμÁ್ಕರ ಹಾಕಿದ್ದರು. ತಮ್ಮ ಮಾವನವರು ಕೂಲಿ ಕೆಲಸ ಮಾಡಿಜೀವನ ನಡೆಸುತ್ತಿದ್ದಾರೆ. ಅವರ ಬಳಿ 3 ಲಕ್ಷಇಲ್ಲ. ಹಾಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದುಡಿವೈಎಸ್ಪಿಗೆದೂರು ನೀಡಿರುವ ಮಾಹಿತಿ ತಿಳಿದು ಮತ್ತೆ 3 ಲಕ್ಷರೂ. ದಂಡ ಹಾಕಿ ಅಮಾನವೀಯ ವರ್ತನೆ ತೋರಿದ್ದರು.
ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೆÇಲೀಸರಿಗೆಎಸ್ಸಿಎಸ್ಟಿ ದೌರ್ಜನ್ಯಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆಕೈಗೊಂಡಿದ್ದರು. ಅದರಂತೆ, ಈಗ 12 ಮಂದಿಯನ್ನು ಬಂಧಿಸಲಾಗಿದೆ.