ಅಕ್ರಮ ಭೂ ಮಂಜೂರಾತಿ ಪರಿಶೀಲನೆಗೆ ಸಮಿತಿ ರಚನೆ

ಕೋಲಾರ.ಆ,೧೮-ಜಿಲ್ಲೆಯಲ್ಲಿ ಅಕ್ರಮ ಭೂ ಮಂಜೂರಾತಿ ಮಾಡಿರುವ ಪ್ರಕರಣಗಳನ್ನು ಪರಿಶೀಲಿಸಲು ೧೪ ಜನರ ತಂಡದ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಅವರು ತಿಳಿಸಿದರು.
ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹಾಗೂ ಕೋಲಾರ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
ಭೂಮಿ ಮಾನಿಟರಿಂಗ್ ಸೆಲ್‌ನಿಂದ ಕಳೆದ ೧೦ ವರ್ಷಗಳಿಂದ ಸರ್ಕಾರದಿಂದ ಮಂಜೂರು ಮಾಡಲ್ಪಟ್ಟ ಜಾಗಗಳ ಸಮೂಲಾಗ್ರ ಮಾಹಿತಿಯನ್ನು ಸಮಿತಿಗೆ ನೀಡಲಿದೆ. ಸಮಿತಿಯು ಭೂ ಲಭ್ಯತಾ ಪಟ್ಟಿ ಅನುಸಾರ ಮಂಜೂರು ಮಾಡಲಾದ ಭೂಮಿಗಳ ವಿವರಗಳನ್ನು ಸಂUಹಿ ಸುತ್ತದೆ. ಈವರೆಗೆ ಮಂಜೂರು ಮಾಡಲಾದ ಜಮೀನುಗಳು ಸಕ್ರಮವಾಗಿವೆ ಅಥವಾ ಇಲ್ಲವೇ ಎಂಬುದನ್ನು ಈ ಸಮಿತಿಯು ಪರಿಶೀಲಿಸಲಿದೆ.
ಮಂಜೂರಾತಿ ದಾಖಲೆಗಳ ನೈಜತೆ, ಸಾಗುವಳಿ ಮಂಜೂರಾತಿ ನಿಯಮಗಳ ಪಾಲನೆ, ಸರ್ಕಾರಿ ಜಮೀನುಗಳ, ಅರಣ್ಯ ಜಮೀನುಗಳ, ವಖ್ಫ್ ಬೋರ್ಡ್‌ನ ಜಮೀನುಗಳ, ಮುಜರಾಯಿ ಜಮೀನುಗಳ, ಗೋಮಾಳಗಳ ಹಾಗೂ ನಗರಸಭೆ ಜಮೀನುಗಳ ಒತ್ತುವರಿ ಬಗ್ಗೆಯೂ ಸಹ ಈ ಸಮಿತಿಯು ಅಧ್ಯಯನ ನಡೆಸಲಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ಜಮೀನಿನ ಸಮರ್ಪಕ ಹಂಚಿಕೆ ಹಾಗೂ ಸ್ಪಷ್ಟ ದಾಖಲೆಗಳನ್ನು, ಮ್ಯೂಟೇಶನ್ ವಿವರಗಳನ್ನು ಅಕ್ರಮವಾಗಿ ಮಂಜೂರು ಮಾಡಿದ ಜಮೀನನ್ನು ಸಕ್ರಮ ಮಾಡುವ ವಿಧಾನ ಇವುಗಳ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿ ವರದಿ ನೀಡುವ ಸಲುವಾಗಿ ಈ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಸಂಬಂಧಪಟ್ಟ ತಾಲ್ಲೂಕಿನ ಭೂ ಮಂಜೂರಾತಿಗೆ ಸಂಬಂಧಿಸಿದಂತೆ ಮಾಹಿತಿಯ ದತ್ತಾಂಶವನ್ನು ಭೂಮಿ ಸಮಾಲೋಚಕರ ಸಮನ್ವಯತೆಯೊಂದಿಗೆ ಭೂಮಿ ಉಸ್ತುವಾರಿ ಕೋಶದಿಂದ ಪಡೆದು ತಂತ್ರಾಂಶದಲ್ಲಿ ಸಮಾಲೋಚಕರ ಪರಿಶೀಲಿಸುವುದು. ಭೂ ಮಂಜೂರಾತಿ ಮಾಡಿರುವ ಪ್ರಕರಣಗಳು ಕರ್ನಾಟಕ ಭೂ ಕಂದಾಯ ಕಾಯ್ದೆ ೧೯೬೪ರ ಕಲಂ ೯೪ಎ, ೯೪ಬಿ, ಮತ್ತು ೯೪ಎ(೪) ರ ನಿಯಮಾವಳಿಗಳನ್ವಯ ಅರ್ಹ ಪ್ರPರಣಗಳೇ ಎಂಬ ಬಗ್ಗೆ ಕಡತ ದಾಖಲೆಗನ ಪರಿಶೀಲಿಸಿ ವರದಿ ನೀಡುವುದು. ಭೂ ಮಂಜೂರಾತಿಯು ನಿಯಮಬಾಹಿರ ಎಂದು ಕಂಡುಬಂದಲ್ಲಿ, ಪ್ರಕರಣಗಳಲ್ಲಿ ಗಮನಿಸಿರುವ ಲೋಪಗಳ ಕುರಿತು ಸ್ವಷ್ಟವಾಗಿ ವಿವರಣೆ ನೀಡುವುದು.
ಕಛೇರಿ ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಕಾರ್ಯ ಹಂಚಿಕೆ ಹಾಗೂ ವೃತ್ತ ಮತ್ತು ಹೋಬಳಿಗಳಿಗೆ ನಿಯೋಜಿಸಿರುವ ಕುರಿತಂತೆ ಕಛೇರಿಯಿಂದ ಹೊರಡಿಸಲಾಗಿರುವ ಹಿಂದಿನ ಹಾಗೂ ಪ್ರಸಕ್ತ ಸಾಲಿನ ಆದೇಶ, ಅಧಿಕೃತ ಜ್ಞಾಪನ, ಅಧಿಸೂಚನೆಗಳ ಪ್ರತಿಯನ್ನು ತನಿಖಾ ತಂಡಕ್ಕೆ ನೀಡುವುದು. ತನಿಖಾ ತಂಡವು ಕೋರುವ ಕಡತಗಳು ಹಾಗೂ ಅಗತ್ಯ ದಾಖಲಾತಿಗಳನ್ನು ತಪ್ಪದೇ ಹಾಜರುಪಡಿಸುವುದು. ತನಿಖಾ ತಂಡವು ಕೋರುವ ಕಡತ ಹಾಗೂ ದಾಖಲಾತಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ವಹಿ ನಿರ್ವಹಿಸಿ, ಸದರಿವಹಿಂiಲ್ಲಿ ನಮೂದಿಸಿ ನಂತರ ತನಿಖಾ ತಂqಕ ನೀಡುವುದು.
ತನಿಖೆ ಮುಕ್ತಾಂi ಗೊಂಡ ಪ್ರPರ ಣಗಳಿಗೆ ಸಂಬಂಧಿಸಿದ ಕಡತ ಹಾಗೂ ದಾಖಲೆಗಳನ್ನು ಮತ್ತು ತನಿಖಾ ತಂಡವು ಸೂಚಿಸುವ ಎಲ್ಲಾ ದಾಖಲಾತಿಗಳನ್ನು ತಹಶೀಲ್ದಾರರು ಖುದ್ದು ಪಡೆದು. ಪ್ರತ್ಯೇಕವಾಗಿ ಭದ್ರತೆಯೊಂದಿಗೆ ಸಂರಕ್ಷಿಸುವುದು. ಭೂಮಿ ತಂತ್ರಾಂಶದಲ್ಲಿ ಭೂ
ಮುಖ್ಯವಾಗಿ ಸರ್ಕಾರಿ ಜಮೀನುಗಳ ಒತ್ತುವರಿಗಳನ್ನು ತೆರವುಗೊಳಿಸುವಲ್ಲಿ ಇಂತಹ ಅಧ್ಯಯನಗಳ ವರದಿಗಳು ಪೂರಕವಾಗುತ್ತವೆ. ಜಿಲ್ಲೆಯಲ್ಲಿ ಅಕ್ರಮ ಭೂ ಮಂಜೂರಾತಿಗೆ ಕಡಿವಾಣ ಬೀಳುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ವಿಡಿಯೋ ಸಂವಾದದಲ್ಲಿ ಭೂ ದಾಖಲೆಗಳ ಉಪನಿರ್ದೇಶಕರಾದ ಭಾಗ್ಯಮ್ಮ, ನಗರಸಭೆ ಆಯುಕ್ತರಾದ ಶಿವಾನಂದ್, ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.