ಅಗತ್ಯ ಬಿದ್ದರೆ ಅಧಿಕಾರಿಗಳು ಟ್ಯಾಂಕರುಗಳ ಮೂಲಕ ನೀರು ಪೂರೈಸಿ:ಸವದಿ

ಅಥಣಿ :ಜೂ.29: ಪಟ್ಟಣದ ಪುರಸಭೆ ವ್ಯಾಪ್ತಿಯ 27 ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರು ಹೆಚ್ಚಿನ ನಿಗಾ ವಹಿಸಬೇಕು, ಕೃಷ್ಣಾ ನದಿಯಲ್ಲಿ ನೀರು ಸಂಪೂರ್ಣ ಬತ್ತುವ ಹಂತದಲ್ಲಿದ್ದು, ಹೀಗಾಗಿ ಅಥಣಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಅಥಣಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಸದಸ್ಯರ ಮತ್ತು ಅಧಿಕಾರಿಗಳ ಸಭೆ ನಡೆಸಿ ಸದಸ್ಯರ ಮೂಲಕ ಬಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪುರಸಭೆ ವ್ಯಾಪ್ತಿಯಲ್ಲಿ ಅನೇಕ ಸಮಸ್ಯೆಗಳಿದ್ದು, ಪಟ್ಟಣದ ಎಲ್ಲ ವಾರ್ಡುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಮಾದರಿ ಪಟ್ಟಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಧಿವೇಶನದ ನಂತರ ಇನ್ನೊಂದು ಸಭೆಯಲ್ಲಿ ಚರ್ಚಿಸೋಣ. ಈಗ ಎಲ್ಲಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಪಟ್ಟಣದ ಬಡಾವಣೆಗಳಲ್ಲಿ ಹಾಗೂ ಗಲ್ಲಿಗಳಲ್ಲಿ ಅನೇಕ ನಿವಾಸಿಗಳಿಗೆ ಸರಿಯಾಗಿ ನೀರು ಲಭ್ಯವಾಗುತ್ತಿಲ್ಲ. ಯಾವ ವಾರ್ಡಿನ ಜನರಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರಿನ ಮೂಲಗಳನ್ನು ಗುರುತಿಸಿ, ಅಗತ್ಯ ಬಿದ್ದರೆ ಬೋರವೆಲ್ ಹಾಗೂ
ಭಾವಿಗಳಿಗೆ ಪಂಪ್ ಸೆಟ್ ಅಳವಡಿಸಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು, ಎಂದರು
ಈಗಾಗಲೇ ತಹಸೀಲ್ದಾರ್ ಮತ್ತು ಉಪವಿಭಾಗದ ಅಧಿಕಾರಿಗಳಿಗೆ ನದಿ ಪಾತ್ರದ ಗ್ರಾಮಗಳಲ್ಲಿ ಬೆಳೆಗಳಿಗೆ ನೀರು ಕೊಡುವುದನ್ನ ನಿಲ್ಲಿಸಿ ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಮಳೆ ಆಗುವವರಿಗೆ ಇರುವ ನೀರನ್ನು ಕಾಯ್ದಿರಿಸಿಕೊಂಡು ಪಟ್ಟಣಕ್ಕೆ ನೀರು ಒದಗಿಸಬೇಕು, ಅದರಂತೆuಟಿಜeಜಿiಟಿeಜ ಪುರಸಭೆಯವರು ಚರಂಡಿಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸದೆ ಇರುವ ದೂರುಗಳು ಬಂದಿವೆ. ಜನರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟಿನ ಸೂಚನೆ ನೀಡಿದರು.

ಪುರಸಭೆ ಸದಸ್ಯರ ಸಮಸ್ಯೆಗಳನ್ನು ಆಲಿಸಿದ ಶಾಸಕರು : ಅಥಣಿ ಪುರಸಭೆಯನ್ನು ನಗರಸಭೆಯನ್ನಾಗಿ ಪರಿವರ್ತಿಸುವುದು, ಪೌರಕಾರ್ಮಿಕ ಸಿಬ್ಬಂದಿಯನ್ನು ಹೆಚ್ಚಿಸುವುದು, ಪುರಸಭೆ ಹೊಸ ಕಟ್ಟಡ ನಿರ್ಮಾಣ, ಜೋಡಿ ಕೆರೆಗಳ ಅಭಿವೃದ್ಧಿ, ಕುಡಿಯುವ ನೀರಿನ ಸಮಸ್ಯೆ, ಪಟ್ಟಣದಲ್ಲಿ ಪಾಕಿರ್ಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಚರಂಡಿಗಳ ಸಮಸ್ಯೆ, ಶೌಚಾಲಯಗಳ ಸಮಸ್ಯೆ, ಮಾರುಕಟ್ಟೆಯ ಸಮಸ್ಯೆ, ಸ್ಮಶಾನದ ಸಮಸ್ಯೆ, ಉದ್ಯಾನವನ ಮತ್ತು ನಾಗರಿಕ ಸೌಲಭ್ಯಗಳ ಒತ್ತುವರಿ ಮಾಡಿರುವುದು, ವಾಣಿಜ್ಯ ಮಳಿಗೆಗಳ ಮರು ಟೆಂಡರ್ ಆಗದೆ ಇರುವುದು, ತಿಪ್ಪೆ ಗುಂಡಿಗಳ ತೆರವು, ಬೈಪಾಸ್ ರಸ್ತೆಯ ನಿರ್ಮಾಣ, ಪಟ್ಟಣದಲ್ಲಿ ಹಾದು ಹೋಗುವ ಹಳ್ಳ ಮತ್ತು ಬ್ರಿಡ್ಜ್ ಗಳ ಸುಧಾರಣೆ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ಶಾಸಕರು ಪುರಸಭೆ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಅಥಣಿ ಪಟ್ಟಣದ ಅಭಿವೃದ್ಧಿಯ ದೃಷ್ಟಿಕೋನದಿಂದ ಪುರಸಭೆ ಸದಸ್ಯರು ಹೊಸ ಆಲೋಚನೆಗಳನ್ನು ಮಾಡಿಕೊಂಡು ಬನ್ನಿ, ಅಧಿವೇಶನದ ನಂತರ ಮತ್ತೊಮ್ಮೆ ಸಭೆ ಸೇರಿ ಪಟ್ಟಣದ 27 ವಾರ್ಡಗಳ ಸವಾರ್ಂಗೀಣ ಅಭಿವೃದ್ಧಿಗಾಗಿ ಚರ್ಚಿಸೋಣ ಎಂದು ಹೇಳಿದರು.

ಮರು ಟೆಂಡರ್ ಕರೆಯುವಂತೆ ಸೂಚನೆ:

ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ 10 ಕೋಟಿ ರೂಪಾಯಿ ಅನುದಾನವನ್ನು ಚುನಾಯಿತರಾದ ಪುರಸಭೆಯ ಸದಸ್ಯರ ಗಮನಕ್ಕೆ ತರದೆ ನಿಮಗೆ ಬೇಕಾದವರಿಗೆ ಟೆಂಡರ್ ನೀಡಿ ಕೆಲವಡೆ ಕಳಪೆ ಕಾಮಗಾರಿ ಮಾಡಿದ್ದೀರಿ, ಇನ್ನು ಕೆಲವು ಸಿ ಸಿ ರಸ್ತೆಗಳು ಚೆನ್ನಾಗಿದ್ದರೂ ಡಾಂಬರೀಕರಣ ಮಾಡಿ ಬಿಲ್ ಪಾಸ್ ಮಾಡಿದ್ದೀರಿ, ಇನ್ನು ಅನೇಕ ಕಾಮಗಾರಿಗಳನ್ನ ಅರ್ಧದಲ್ಲಿ ನಿಲ್ಲಿಸಿದ್ದೀರಿ. ಇಲ್ಲಸಲ್ಲದ ನೆಪ ಹೇಳಿದರೆ ನಡಿಯಲ್ಲ, ಇದರಲ್ಲಿ ಭ್ರಷ್ಟಾಚಾರ ಮಾಡಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ, ಪಟ್ಟಣದ ಅಭಿವೃದ್ಧಿಗೆ ಬಂದಿರುವ 10 ಕೋಟಿ ರೂಪಾಯಿ ಸಣ್ಣದಲ್ಲ, ಎಲ್ಲ ವಾರ್ಡಿನ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಭಿವೃದ್ಧಿಗೆ ಅನುಗುಣವಾಗಿ 27 ವಾರ್ಡಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಕೈಗೊಳ್ಳಬೇಕು. ಈಗಾಗಿರುವ ಟೆಂಡರ್ ಅನ್ನು ರದ್ದುಗೊಳಿಸಿ ಕೂಡಲೇ ಮರು ಟೆಂಡರ್ ನಡೆಸಿ ಕಾಮಗಾರಿಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಅಥಣಿ ಮತಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರನ್ನು ಅಥಣಿ ಪುರಸಭೆ ಪೌರಕಾರ್ಮಿಕರು ಸನ್ಮಾನಿಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಸೇರಿದಂತೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಅಭಿಯಂತರ ಎಸ್ ಆರ್ ಚೌಗಲಾ, ವರ್ಧಮಾನ ಹುದ್ದಾರ, ಕುಮಾರ ಮಾಳಿ, ಸಹದೇವ ಅವಟಿ, ಪುರಸಭಾ ಪೌರಕಾರ್ಮಿಕ ಸಂಘದ ಅಧ್ಯಕ್ಷ ಬಸವರಾಜ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.