ದಾವಣಗೆರೆ.ಸೆ.೨೦; ಕಿಡಿಗೇಡಿಗಳ ಅಟ್ಟಹಾಸಕ್ಕೆ ೩೦ ಕ್ಕೂ ಹೆಚ್ಚು ಅಡಿಕೆ ಗಿಡಗಳು ಬಲಿಯಾಗಿರುವ ಘಟನೆ ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಬಸಪ್ಪ ನವಿಲೇರ ಎನ್ನುವರ ಜಮೀನಿನಲ್ಲಿ ರಾತ್ರೋರಾತ್ರಿ ೩೦ ಕ್ಕೂ ಹೆಚ್ಚು ಗಿಡಗಳನ್ನು ಕಿಡಿಗೇಡಿಗಳು ಕತ್ತರಿಸಿದ್ದಾರೆ.
ಅಡಿಕೆ ಗಿಡಗಳನ್ನು ನಾಶ ಮಾಡಿದವರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ನ್ಯಾಮತಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.