ಅಧಿಕ ಶ್ರಾವಣ ಮಾಸ: ಸುಮಂಗಲೇಯರಿಗೆ ಅರಿಶಿಣ, ಕುಂಕುಮ ಮಂಗಳದೃವ್ಯ ವಿತರಣೆ

ಹುಮನಾಬಾದ್:ಆ.15: ಅಧಿಕ ಶ್ರಾವಣ ಮಾಸದ ಅಂಗವಾಗಿ ಅಗಸ್ಟ್ 15ರ ಸಾಯಂಕಾಲ 4 ಗಂಟೆಗೆ ಪಟ್ಟಣದ ನಗರೇಶ್ವರ ದೇವಸ್ಥಾನದ ಹತ್ತಿರ ಇರುವ ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್ಟ್ನ್ ಕಚೇರಿಯಲ್ಲಿ ಸುಮಂಗಲೇರಿಗೆ, ಅರಿಶಿಣ, ಕುಂಕುಮ ಸೇರಿದಂತೆ ಮಂಗಳದೃವ್ಯ ವಿತರಣೆ ಮಾಡಲಾಗುತ್ತಿದೆ ಎಂದು ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್ಟ್ನ ತಾಲ್ಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಮಹರ್ಷಿ ಆನಂದ ಗುರುಜೀ ಅವರ ಆಶ್ರಮದ ಲಕ್ಷ ಸ್ವಾಮಿಗೆ ಅರಿಶಿಣ, ಕುಂಕುಮ, ಮಂಗಳದೃವ್ಯದಿಂದ ವಿಶೇಷ ಪೂಜೆ, ಅರ್ಚನೆ ಮಾಡಿಸಿ ಮಂಗಳದೃವ್ಯ ತರಲಾಗಿದೆ. ಪಟ್ಟಣದ ಸುಮಂಗಲೇಯರು ಬಂದು ಈ ಮಹಾಪ್ರಸಾದವನ್ನು ತೆಗೆದುಕೊಳ್ಳಬೇಕು ಎಂದು ಶ್ರೀ ಅನ್ನಪುರ್ಣೇಶ್ವರಿ ದೇವಿ ಮಹಿಳಾ ಟ್ರಸ್‍ನ ತಾಲ್ಲೂಕು ಉಪಾಧ್ಯಕ್ಷೆ ಶೋಭಾ ಗುರಮಿಟಕಲ್, ಕಾರ್ಯದರ್ಶಿ ಸುರೇಖಾ ವಿಭೂತಿ, ಕೋಶಾಧ್ಯಕ್ಷೆ ಸುಧಾರಾಣಿ ಪುಜಾರಿ, ಸದಸ್ಯರಾದ್ ಅನಿತಾ ಚಿದ್ರಿ, ದ್ರೋಪತಿ ಶಮಶಾಬಾದೆ, ವಿಮಲಾ ಸಂಗಮಕರ್, ಅನಿತಾ ಅಶೋಕ, ಉಮಾ ಕುಲಕರ್ಣಿ, ಮನವಿ ಮಾಡಿದ್ದಾರೆ.