ಅನುಭವ ಮಂಟಪ ಉತ್ಸವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‍ಗೆ ಆಹ್ವಾನ

ಭಾಲ್ಕಿ:ನ.18: ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪದ ವತಿಯಿಂದ ನ.25 ಮತ್ತು 26 ರಂದು ಜರಗುವ 44ನೆಯ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ನೇತೃತ್ವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿ, ಆಮಂತ್ರಣ ಪತ್ರಿಕೆ ನೀಡಿ, ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಎರಡು ದಿವಸ ಅರ್ಥಪೂರ್ಣ ಸಮಾರಂಭ ಜರುಗಲಿದ್ದು ತಾವುಗಳು ಸಮಾರಂಭದ ಉದ್ಘಾಟನೆಯಲ್ಲಿ ಪಾಲ್ಗೊಂಡು ಗ್ರಂಥ ಬಿಡುಗಡೆಗೊಳಿಸುವಂತೆ ಕೋರಲಾಯಿತು.

ಈ ಸಂದರ್ಭದಲ್ಲಿ ರವಿ ಬೊರವೇಲ್ಸ್ ಮಾಲೀಕ ರವೀಂದ್ರ ಚಿಡಗುಪ್ಪೆ, ಭಾತಂಬ್ರಾ ಗ್ರಾಪಂ ಮಾಜಿ ಉಪಾಧ್ಯಕ್ಷ ಮಹಾದೇವ ಬೇಲೂರೆ ಇದ್ದರು.