
ಬೀದರ. ಆ.24: ಬೀದರ್ ನ್ಯೂ ಹೌಸಿಂಗ್ ಕಾಲೋನಿಯಲ್ಲಿ ಆಗಸ್ಟ್ 21 ರಂದು ನಡೆದ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಲಾಗಿದ್ದು, ಆರೋಪಿತರು ಕೊಲೆಯ ಮಹಿಳೆಯ ಮಾವ ಹಾಗೂ ಮೈದುನರಾಗಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಹೇಳಿದರು.
ಅವರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಸುದ್ಧಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಕೊಲೆಯಾದ ಮಹಿಳೆ ಲಕ್ಷ್ಮೀ ಬೀದರ ತಾಲ್ಲೂಕಿನ ಮಾಳೆಗಾಂವ ಗ್ರಾಮದ ನಿವಾಸಿಯಾಗಿದ್ದು, ಅದೇ ಗ್ರಾಮದ ಓರ್ವ ವ್ಯಕ್ತಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಶಂಕೆಯ ಮೇರೆಗೆ ಆರೋಪಿಗಳಾದ ಶಿವಕುಮಾರ ಮಾರುತಿ ರೆವಣಗೆ, ಮಾರುತಿ ಯಲ್ಲಪ್ಪ ರೆವಣಗೆ ಇರ್ವರು ಸೇರಿಕೊಂಡು ಮಹಿಳೆಯ ಹಿಂದೆ ಸಹಚರರನ್ನು ಬಿಟ್ಟು, ಸಹಚರರ ನೀಡಿದ ಮಾಹಿತಿ ಮೇರೆಗೆ ಆರೋಪಿತರು ಸ್ಥಳಕ್ಕೆ ತೆರಳಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆ ಇನ್ನು ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಆಗಸ್ಟ್ 22 ರಂದು ಖಚಿತ ಮಾಹಿತಿ ಮೇರೆಗೆ ಮಂಗಲಗಿ ಟೋಲ್ ಪ್ಲಾಜಾ ಹತ್ತಿರ ತೆರಳಿ ತೆಲಂಗಾಣ ಕಡೆಯಿಂದ ಬರುತ್ತಿದ್ದ ಒಂದು ಬಿಳಿ ಕಾರಿಗೆ ಕೈ ಸನ್ನೆ ಮಾಡಿ ನಿಲ್ಲಿಸಲು ಸೂಚಿಸಿದಾಗ ಕಾರ ಚಾಲಕನ್ನು ವಾಹನ ನಿಲ್ಲಿಸಿದಂತೆ ಮಾಡಿ ಟೋಲ್ ಪ್ಲಾಜಾದಿಂದ ಹಿಂತಿರುಗಿಸಿಕೊಂಡು ಓಡಿ ಹೋಗುತ್ತಿರುವಾಗ ಮನ್ನಾಏಖೇಳ್ಳಿ ಪಿ.ಎಸ್.ಐ.ಬಸವರಾಜ ಚಿತಕೋಟೆ ನೇತೃತ್ವದ ತಂಡವು ಬೆನ್ನಟ್ಟಿದಾಗ ಸದರಿ ಕಾರನ್ನು ಮನ್ನಾಏಖೇಳ್ಳಿಯ ಎಂ.ಆರ್.ಎಫ್.ಟೈರ್ ಶೋ ರೂಮ್ ಹತ್ತಿರ ಬಿಟ್ಟು ಇಬ್ಬರು ಆರೋಪಿತರರು ಪರಾರಿಯಾಗಿರುತ್ತಾರೆ.
ಕಾರನ್ನು ಪರಿಶೀಲಿಸಿ ನೋಡಲಾಗಿ ಅದರಲ್ಲಿದ್ದ 118 ಕೆ.ಜಿ. ಗಾಂಜಾ ಅಂದಾಜು ಕಿಮ್ಮತ್ತು 1 ಕೋಟಿ 18 ಲಕ್ಷ ರೂಪಾಯಿತಿ ಮತ್ತು ಕಾರಿನ ಕಿಮ್ಮತ್ತು 8 ಲಕ್ಷ ಆಗಿರುತ್ತದೆ. ನಂತರ ಅದನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿ ಆರೋಪಿತರ ಪತ್ತೆಗೆ ಜಾಲ ಬಿಸಲಾಗಿದೆ ಎಂದು ಹೇಳಿದರು.
ಬೀದರ ಜಿಲ್ಲೆಯ ಮಾರ್ಗವಾಗಿ ಅಂತರಾಜ್ಯಕ್ಕೆ ಅಕ್ರಮವಾಗಿ ಮಾದಕ ವಸ್ತುಗಳ ಸಾಕಾಣಿಕೆ ತಡೆಗೆ ವಿವಿಧ ಚೆಕ್ಪೋಸ್ಟ್ಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು ಹಾಗೂ ಗುಪ್ತಚರ ಇಲಾಖೆಯಿಂದ ಹದ್ದಿನ ಕಣ್ಣು ಇಡಲಾಗಿದ್ದು, ಇದರಿಂದ ಅಕ್ರಮವಾಗಿ ಮಾದಕ ವಸ್ತುಗಳ ಸಾಕಾಣಿಕೆ ತಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಹುಮನಾಬಾದ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ, ಚಿಟಗುಪ್ಪಾ ಸಿಪಿಐ ಮಹೇಶಗೌಡ ಪಾಟೀಲ, ಪಿಎಸ್ಐ ತಸ್ಲೀಮಾ ಪರವಿನ್, ಬೀದರ ನೂತನ ನಗರ ಪೊಲೀಸ್ ಠಾಣೆ ಹಾಗೂ ಮನ್ನಾಎಖೇಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.