
ಸಿರವಾರ,ಮಾ.೧೮- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಆಗ ಮಹಿಳೆಯರಿಗೆ ಗೃಹಲಕ್ಷ್ಮೀ, ಉಚಿತ ವಿದ್ಯುತ್ ಸೇರಿ ಹಲವು ಯೋಜನೆಯನ್ನು ರೂಪಿಸಿದ್ದು ಇವುಗಳನ್ನು ಮನೆ ಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ತಲುಪಿಸಿ ಜಾಗೃತಿ ಮೂಡಿಸಲಾಗುತ್ತಿದ್ದೇವೆ ಎಂದು ಕಾಂಗ್ರೆಸ್ ಯುವ ಮುಖಂಡ & ಪ.ಪಂ ಸದಸ್ಯ ಹಾಜಿ ಚೌದ್ರಿ ಹೇಳಿದರು.
ಪಟ್ಟಣದ ವಾರ್ಡ್ ನಂ. ೦೬ ರಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ನ್ನು ವಿತರಣೆ ಮಾಡಿ ಮಾತನಾಡಿದ ಅವರು ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ದೇಶದ, ರಾಜ್ಯದ ಅಭಿವೃದ್ಧಿಗೆ ಬುನಾದಿ ಹಾಕಿದೆ, ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಆಶ್ರಯ ಮನೆಗಳಿಗೆ ಅನುದಾನ ನೀಡಿಲ್ಲ ಇಂತಹ ವಿಷಯಗಳನ್ನು ಮತದಾರರಿಗೆ ಮನದಟ್ಟು ಮಾಡಿ, ಮುಂಬರುವ ವಿಧಾನ ಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಲು ಮನವಿಮಾಡಿ, ಕಾರ್ಯಕರ್ತರು ಹಗಲು ರಾತ್ರಿ ಕೆಲಸಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರಬೇಕು. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೇಸ್ ಮಾತ್ರ, ಪ್ರತಿ ವ್ಯಕ್ತಿಗೆ ೧೦ ಕೆಜಿ ಅಕಿಯನ್ನು ಉಚಿತವಾಗಿ ನೀಡುತ್ತೆವೆ. ಪ್ರಣಾಳಿಕೆಯ ಗ್ಯಾರೆಂಟಿ ಕಾರ್ಡ ನ ಮೇಲೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಿ ಇದೆ. ಸರ್ಕಾರ ಬರುವುದು ಖಚಿತ, ಯೋಜನೆ ಜಾರಿಗೆ ತರುವುದು ಖಚಿತ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಡಿ.ಹುಸೇನ್ ಸೇರಿದಂತೆ ಇನ್ನಿತರರು ಇದರು.