
ಮೈಸೂರು: ಮಾ.09:- ಪರೀಕ್ಷೆ ಎದುರಿಸುತ್ತಿರುವ ವಿಧ್ಯಾರ್ಥಿಗಳಿಗೆ ಗುಡ್ ಲಕ್ ಹೇಳಿದ ಮೈಸೂರು ಗೆಳೆಯರ ಬಳಗದ ವತಿಯಿಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಪೆನ್ ನೀಡಿ ಕಾಂಗ್ರೆಸ್ ಮುಖಂಡ ಹರೀಶ್ ಗೌಡ ಶುಭ ಕೋರಿದರು.
ರಮಾ ವಿಲಾಸರಸ್ತೆಯಲ್ಲಿರುವ ಮರಿಮಲ್ಲಪ್ಪ ಕಾಲೇಜಿನ ಸೆಂಟರ್ ನಲ್ಲಿ ಪರೀಕ್ಷೆ ಎದುರಿಸುತ್ತಿರುವ ವಿಧ್ಯಾರ್ಥಿಗಳಿಗೆ ಗುಡ್ ಲಕ್ ಹೇಳಿದ ಯುವಕರು. ಮೈಸೂರಿಗೆ ಉನ್ನತ ಫಲಿತಾಂಶ ಬರಲೆಂದು ಹಾರೈಕೆ. ನಿಮ್ಮೊಂದಿಗೆ ನಾವಿದ್ದೇವೆಂದು ವಿಧ್ಯಾರ್ಥಿಗಳಿಗೆ ಅಭಯ ನೀಡಿದ ನಾಗರೀಕರು.
ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಹರೀಶ್ ಗೌಡ ಮಾತನಾಡಿ ಪರೀಕ್ಷೆ ಸಂಭ್ರಮದಿಂದ ಬರೆಯಿರಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಂಭ್ರಮದಿಂದ ಬರೆದರೆ ನಿರೀಕ್ಷೆಗಿಂತಲೂ ಹೆಚ್ಚಿನ ಅಂಕಗಳನ್ನು ಪಡೆಯಬಹುದು.
ವಿದ್ಯಾರ್ಥಿಗಳು ಪರೀಕ್ಷೆ ಶತ್ರು ಎಂದು ಪರಿಗಣಿಸಿದರೆ ವರ್ಷವಿಡೀ ಕಲಿತ ಪಾಠಗಳೆಲ್ಲ ಮರೆತು ಹೋಗುತ್ತವೆ, ಯಾವುದೇ ಕಾರಣಕ್ಕೂ ಪರೀಕ್ಷೆ ಭೂತ ಎಂದುಕೊಳ್ಳಬೇಡಿ ಹಬ್ಬದ ರೀತಿಯಲ್ಲಿ ಸಂಭ್ರಮಿಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಪೆÇೀಷಕರು ತುಂಬಬೇಕು.
ಸಂಕುಚಿತ ಮನೋಭಾವದಿಂದ ಸುಮ್ಮನೆ ಕುಳಿತರೆ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ ದೊಡ್ಡ ದೊಡ್ಡ ಸಂಶೋಧನೆಗಳು ಹುಟ್ಟಿಕೊಂಡಿದ್ದೇ ಪ್ರಶ್ನೆಗಳಿಂದ ಎನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ,ಪರೀಕ್ಷೆ ಒಂದು ಸಂಭ್ರಮ ಎನ್ನುವುದರ ಜೊತೆಗೆ ಆಂತರಿಕವಾಗಿ ನೀವು ಮೊದಲು ಪ್ರಶ್ನೆ ಮಾಡಿಕೊಳ್ಳಿ ,ಪರೀಕ್ಷೆ ಎಂಬ ಭಯ, ಒತ್ತಡದಿಂದ ಮೊದಲು ಹೊರ ಬನ್ನಿ. ಇಲ್ಲವಾದಲ್ಲಿ ನೀವು ಕಲಿತ ಎಲ್ಲ ಪಾಠಗಳು ಮರೆತು ಬಿಡಬಹುದು ಎಂತಹ ಕಠಿಣ ಸಂದರ್ಭದಲ್ಲಿಯೂ ನೀವು ಕೀಳರಿಮೆ ಇಟ್ಟುಕೊಳ್ಳಬಾರದು. ಪೆÇೀಷಕರು ಕೂಡ ಮಕ್ಕಳ ಮೇಲೆ ನಂಬಿಕೆ ಇಡಬೇಕು ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಪರಮಪೂಜ್ಯ ಇಳೈಆಳ್ವಾರ್ ಸ್ವಾಮೀಜಿ ಮೈಸೂರು ಗೆಳೆಯರ ಬಳಗದ ಅಧ್ಯಕ್ಷ ರವಿಚಂದ್ರ, ನವೀನ್, ಉಮೇಶ್, ಎಸ್ ಎನ್ ರಾಜೇಶ್, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು.