ಚಿಂಚೋಳಿ,ಜೂ ೧೯: ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ ವಡ್ಡರ್ (೪೦), ಮಗ ಓಂಕಾರ (೯) ಹಾಗೂ ಮಗಳು ಅಕ್ಷರಾ (೬) ಮೃತ ದುರ್ದೈವಿಗಳು.
ಮೃತಪಟ್ಟ ಹಣಮಂತ ಕುಂಚಾವರಂ ಅವರು ಕೆಲ ವರ್ಷದ ಹಿಂದೆ ತೆಲಂಗಾಣದ ತಾಂಡೂರಿನಲ್ಲಿ ಮನೆ ಕಟ್ಟಿಕೊಂಡು ಅಲ್ಲಿಯೇ ನೆಲೆಸಿದ್ದರು. ಈಚೆಗೆ ಹೈದರಾಬಾದಗೆ ತೆರಳಿದ್ದ ಹಣಮಂತ ಮಕ್ಕಳೊಂದಿಗೆ ಕುಂಚಾವರಂಗೆ ಬಂದಿದ್ದಾರೆ. ಶುಕ್ರವಾರ ತನ್ನ ಸಹೋದರ ಗ್ರಾಮ ಪಂಚಾಯತ ಸದಸ್ಯ ಗೋಪಾಲ ಎಂಬುವವರಿಗೆ ಕರೆ ಮಾಡಿ ನಾನು ಮಕ್ಕಳೊಂದಿಗೆ ಬಾವಿಗೆ ಬಿದ್ದು ಸಾಯುತ್ತಿದ್ದೇನೆ. ನನ್ನ ಶವ ತೆಗೆದು ಅಂತ್ಯಕ್ರಿಯೆ ನಡೆಸುವಂತೆ ಕೋರಿಕೊಂಡಿದ್ದಾನೆ. ತಕ್ಷಣ ಈ ವಿಷಯ ಗೋಪಾಲ, ಅವರು ಕುಂಚಾವರಂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಅಲರ್ಟ್ ಆದ
ಕರ್ನಾಟಕ ಮತ್ತು ತೆಲಂಗಾಣ ಪೊಲೀಸರು, ಅಗ್ನಿಶಾಮಕ ಠಾಣೆಯವರು ಹುಡುಕಿದರೂ ಇವರ ಪತ್ತೆಯಾಗಿಲ್ಲ .ಆದರೆ ಭಾನುವಾರ ಕುಂಚಾವರಂ ಬಳಿಯ ಪೋಚಾವರಂ ಗ್ರಾಮದ ತೋಟದ ಬಾವಿಯಲ್ಲಿ ಮೂವರ ಶವ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಂಚಾವರಂ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಶವ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಚಿಂಚೋಳಿ ಡಿಎಸ್ಪಿಗಳಾದ ಕೆ ಬಸವರಾಜ, ಚಿಂಚೋಳಿ ಸಿಪಿಐ ಅಂಬಾರಾಯ ಕಮಾಲಮನಿ, ಕುಂಚಾವರಂ ಪಿಎಸ್ಐ ಉದಂಡಪ್ಪ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.