ಎಂವೈ ಪಾಟೀಲರನ್ನು ಮಂತ್ರಿ ಮಾಡಲು ಒತ್ತಾಯ

ಕಲಬುರಗಿ: ಮೇ.18:ಅಫಜಲಪೂರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಎಂವೈ ಪಾಟೀಲವರನ್ನು ಸಂಪುಟ ದರ್ಜೆ ಸಚಿವರಾಗಿ ಮಾಡಬೇಕೆಂದು ಕಾಂಗ್ರೆಸ್ ಮಹಿಳಾ ರಾಜ್ಯ ಉಪಾಧ್ಯಕ್ಷೆ ರೇಣುಕಾ ಬಾಬು ಚವ್ಹಾಣ ಅವರು ಒತ್ತಾಯಿಸಿದ್ದಾರೆ.

ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಮತ್ತು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡಗೆ ಮನವಿ ಮಾಡಿದ್ದಾರೆ.