ಎಎಸ್‌ಐ ಆನಂದ್ ನಿಧನ

ಬೆಂಗಳೂರು, ಮೇ.೧೬- ಕೆಲಸ ಮುಗಿಸಿ ಮನೆಗೆ ಹೋಗಿ ಮಲಗಿದ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯ ಎಎಸ್‌ಐ ಮಲಗಿದ್ದ ರೀತಿಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯ ಎಎಸ್‌ಐ ಆನಂದ್ ಕುಮಾರ್ ಕೊನೆಯುಸಿರೆಳೆದಿದ್ದಾಳೆ.
ನಿನ್ನೆ ರಾತ್ರಿ ಪಾಳಿ ಕೆಲಸ ಮಾಡಿದ ಆನಂದ್ ಅವರು ನಾಗರಭಾವಿ ಬಳಿಯ ಮನೆಯಲ್ಲಿ ತೆರಳಿ ಮಲಗಿದ್ದರು. ಆದರೆ, ಇಂದು ಮುಂಜಾನೆ ಎಂದಿನಂತೆ ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ.
ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಆತಂಕದಲ್ಲೇ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ವೇಳೆ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.