
ಬೀದರ. ಏ. 17: ಮೇ 10 ರಂದು ನಡೆಯುವ ಮತದಾನ ದಿನದಂದು ಬೀದರ ಜಿಲ್ಲೆಯ ಎಲ್ಲಾ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಶನಿವಾರ ಭಾರತ ಚುನಾವಣಾ ಆಯೋಗ. ಜಿಲ್ಲಾಡಳಿತ ಬೀದರ. ಸ್ವೀಫ್ ಸಮಿತಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬೀದರ ನಗರದ ಮಕ್ಕಳ ಆಟದ ಮೇಳದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕುರಿತ ಸ್ವೀಫ್ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸಾಕಷ್ಟು ಸ್ವೀಫ್ ಕಾರ್ಯಕ್ರಮಗಳು ನಡೆಯುತ್ತಿವೆ ವಿಶೇಷವಾಗಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ ವಿಧಾನ ಸಭಾ ಕ್ಷೇತ್ರಗಳಲ್ಲಿ ಭೂತ ಮಟ್ಟದಿಂದಲೇ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿಯು ಮತದಾನ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದ್ದು. 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಮತದಾರರು ತಮ್ಮ ಮತಗಳನ್ನು ಚಲಾಯಿಸಬೇಕೆಂದರು.
80 ವರ್ಷ ಮೇಲ್ಪಟ್ಟವರು, ಅಂಗವಿಕಲರು, ಕಾಯಿಲೆಯಿಂದ ಬಳಲುತ್ತಿರುವವರು ಮತದಾನ ಕೇಂದ್ರಕ್ಕೆ ನಡೆದುಕೊಂಡು ಹೋಗಲಿಕ್ಕೆ ಆಗದಂತವರಿಗೆ ಆಟೋ ಮತ್ತು ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತಿದೆ ಈ ಪ್ರಜಾಪ್ರಭುತ್ವ ಮತದಾನ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಎಂ. ಮಾತನಾಡಿ ಕರ್ನಾಟಕ ವಿಧಾನ ಸಭೆ ಚುನಾವಣೆ- 2023 ಕುರಿತು ಬೀದರ ಜಿಲ್ಲೆಯಾದ್ಯಂತ ಮತದಾನದ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂವಿಧಾನ ನಮಗೆ ಕೊಟ್ಟ ನಮ್ಮ ಮೂಲಭೂತ ಹಕ್ಕನ್ನು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಚಲಾಯಿಸಬೇಕು ಮತ್ತು ಮತದಾನ ದಿನದಂದು ಎಲ್ಲರೂ ಮತದಾನ ಮಾಡಬೇಕೆಂದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ ಮತದಾನ ನಮ್ಮೆಲ್ಲರ ಹಕ್ಕು ಈ ಸಾರ್ವತ್ರಿಕ ಚುನಾವಣೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಮತ ಚಲಾಯಿಸಬೇಕು ಮತದಾನ ಜಾಗೃತಿ ಕುರಿತು ಈ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಮಗೆಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿಗಳು ಸಹಿ ಮಾಡುವ ಮೂಲಕ ಎಲ್ಲರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಮತದಾನ ಸೆಲ್ಪಿ ಪೆÇೀಟೊಗಳನ್ನು ತೆಗೆಸಿಕೊಂಡರು.
ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಚುನಾವಣಾ ಮಾಸ್ಟರ ತರಬೇತಿದಾರ ಡಾ. ಗೌತಮ ಅರಳಿ. ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಅಭಯ ಕುಮಾರ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಜಗನ್ನಾಥ ಮೂರ್ತಿ. ಬೀದರ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್. ಬಿ.ವಿ.ಬಿ ಕಾಲೇಜಿನ ಪ್ರಾಂಶುಪಾಲರಾದ ವಿಠ್ಠಲ್ ರೆಡ್ಡಿ. ಹಾಗೂ ಬೀದರ ನಗರದ ವಿವಿಧ ಕಾಲೇಜು. ವಸತಿ ನಿಲಯ. ಎನ್.ಸಿ.ಸಿ. ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.