ಎಸ್ಸಿ ಗೆ ಒಳ ಮೀಸಲಾತಿ ಸ್ವಾಗತಾರ್ಹ : ಮರತೂರಕರ್

ಕಲಬುರಗಿ:ಮಾ.26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಸಿ ಜಾತಿಗೆ ಒಳ ಮೀಸಲಾತಿಯನ್ನು ಪ್ರಕಟಿಸಿರುವುದನ್ನು ಹಾಗೂ ವೀರಶೈವ ಲಿಂಗಾಯತ, ಪಂಚಮಸಾಲಿ ಮತ್ತು ಒಕ್ಕಲಿಗರ ಮೀಸಲಾತಿ ಸೌಲಭ್ಯ ಘೋಷಣೆ ಮಾಡಿರುವುದನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸ್ವಾಗತಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವುದು ಸವಾಲಿನ ಕೆಲಸವಾಗಿತ್ತು. ಸದಾಶಿವ ಆಯೋಗದ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವು ಸಮರ್ಥವಾಗಿ ಜಾರಿ ಮಾಡಿದ್ದು, ಎಡಗೈ ಗೆ ಶೇ. 6ರಷ್ಟು , ಬಲಗೈ ಗೆ ಶೇಕಡಾ 5.5 , ಮತ್ತು ಅಸ್ಪಶ್ಯರಿಗೆ ಶೇ. 4.5 ಹಾಗೂ ಇತರರಿಗೆ ಶೇಕಡಾ 1ರಷ್ಟು ಮೀಸಲು ಜಾರಿ ಮಾಡಿರುವುದು ಶ್ಲಾಘನೀಯ ಎಂದರು.ಲಿಂಗಾಯತ ಸಮುದಾಯಕ್ಕೆ ಶೇಕಡಾ 7 ರಷ್ಟು ಮೀಸಲಾತಿ ನೀಡುವ ಮೂಲಕ ಈ ಸಮಾಜವು ಎರಡು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಸರ್ಕಾರ ತಾರ್ತಿಕ ಅಂತ್ಯವನ್ನು ನೀಡಿದೆ.ಶೈಕ್ಷಣಿಕ, ಸಾಮಾಜಿಕ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಮೀಸಲಾತಿ ಸೌಲಭ್ಯವು ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.