ಎಸ್ ಎಸ್ ಮಲ್ಲಿಕಾರ್ಜುನ್ ಗೆ ಉಪಮುಖ್ಯಮಂತ್ರಿ‌ ಸ್ಥಾನ ನೀಡಲು ಒತ್ತಾಯ

ದಾವಣಗೆರೆ.ಮೇ.೧೭; ಸರ್ವ ಧರ್ಮಗಳ  ನಾಯಕ ಎಸ್.ಎಸ್ ಮಲ್ಲಿಕಾರ್ಜುನ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಭಾರತ್ ಸೌಹಾರ್ದ ಸಂಘದ ಅಧ್ಯಕ್ಷ ಬುತ್ತಿ ಹುಸೇನ್ ಪೀರ್ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಧ್ಯಕನಾಟಕದ ದಾವಣಗೆರೆಯಲ್ಲಿ ಸರ್ವ ಜಾತಿ, ಮತ, ಧರ್ಮಿಯರನ್ನು ಪ್ರೀತಿಸುವ ಯುವಕರ ಕಣ್ಮಣಿ,  ಎಸ್.ಎಸ್. ಮಲ್ಲಿಕಾರ್ಜುನ್ ರನ್ನು ರಾಜ್ಯದ ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು.  ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ರೋಗದಲ್ಲಿ ಎಲ್ಲಾ ವರ್ಗದವರಿಗೂ ತಮ್ಮ ಸ್ವಂತ ಖರ್ಚಿನಲ್ಲಿ ಉಚಿತ ವ್ಯಾಕ್ಸಿನ್ ನೀಡುವ ಮೂಲಕ ಹಲವಾರು ಜನರ ಆರೋಗ್ಯವನ್ನು ಕಾಪಾಡಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ  ಸಿದ್ಧರಾಮಯ್ಯನವರ ಹುಟ್ಟುಹಬ್ಬವನ್ನು ಆಚರಿಸಿ 15 ಲಕ್ಷಕ್ಕೂ ಅಧಿಕ ಅಭಿಮಾನಿಗಳನ್ನು ಕಾರ್ಯಕರ್ತರನ್ನು ಸೇರಿಸಿ, ಕಾಂಗ್ರೆಸ್ ಪಕ್ಷದ ಬಲವರ್ಧನೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿವೃದ್ಧಿ ಯೋಜನೆಗಳ ಹರಿಕಾರ, ದೂರದೃಷ್ಟಿಯುಳ್ಳ  ಎಸ್.ಎಸ್.ಎಂ. ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಿಸಿದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅನುಕೂಲವಾಗುತ್ತದೆ. ಶಾಸಕ ಶಾಮನೂರು ಶಿವಶಂಕರಪ್ಪನವರ ಮನೆತನದ ಸೊಸೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್‌ ಸೇರಿದಂತೆ ಎಲ್ಲಾ ಸದಸ್ಯರು ಸದಾ ಜನಸೇವೆಯನ್ನು ಮಾಡಲು ಉತ್ಸುಕರಾಗಿದ್ದಾರೆ. ಬಡವರ ಕೆಲಸ ದೇವರ ಕೆಲಸವೆಂದು ಭಾವಿಸಿ ಮಕ್ಕಳು, ಮೊಮ್ಮಕ್ಕಳು ಸಮೇತ ಕಾರ್ಯದಲ್ಲಿ ತೊಡಗಿದ್ದಾರೆ. ದಾವಣಗೆರೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಸಾಗುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ ‌
ಸುದ್ದಿಗೋಷ್ಠಿಯಲ್ಲಿ ಎನ್.ಎಂ ಆಂಜನೇಯ ಗುರೂಜಿ,ಕಾಯಿಪೇಟೆ ಹಾಲೇಶ್,ಮಹಬೂಬ್ ಶೇಖ್,ಹೆಚ್.ನವೀದ್ ಅಹಮದ್, ಆದಿಲ್ ಬಾಷಾ,ತಾಹೀರ್ ಹುಸೇನ್ ,ಎಸ್.ಕೆ ಜಬೀವುಲ್ಲಾ,ಇರ್ಫಾನ್,ಸಾದಿಕ್ ಇದ್ದರು.