ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ

ಭುವನೇಶ್ವರ (ಒಡಿಶಾ), ಮಾ.೩- ಒಡಿಶಾದ ರಾಜಧಾನಿ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಪಕ್ಷಿಯೊಂದು ಡಿಕ್ಕಿ ಹೊಡೆದ ಪರಿಣಾಮ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಹಾರಾಷ್ಟ್ರದ ಪುಣೆಗೆ ಈ ವಿಮಾನ ಹೊರಟಿತ್ತು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಮಾಹಿತಿ ಮೂಲಗಳು ತಿಳಿಸಿವೆ.
ನಿನ್ನೆ ಪುಣೆಗೆ ಹೊರಟಿದ್ದ ಏರ್ ಏಷ್ಯಾ ವಿಮಾನವು ಭುವನೇಶ್ವರದಿಂದ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪಕ್ಷಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೂಡಲೇ ತಾಂತ್ರಿಕ ದೋಷವನ್ನು ಉಲ್ಲೇಖಿಸಿ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಆನಂತರ ವಿಮಾನವನ್ನು ಪರಿಶೀಲನೆ ನಡೆಸಲಾಗಿದೆ.
ಮತ್ತೊಂದೆಡೆ ಬುಧವಾರ ಕೂಡ ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ಮಸ್ಕತ್‌ಗೆ ತೆರಳುತ್ತಿದ್ದ ಸಲಾಮ್ ಏರ್ ವಿಮಾನವು ತಡರಾತ್ರಿ ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಇಂಜಿನ್‌ನಿಂದ ಹೊಗೆ ಹೊರಸೂಸುತ್ತಿರುವುದನ್ನು ಪೈಲಟ್ ಪತ್ತೆ ಹಚ್ಚಿದ್ದರು.
ನಂತರ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿ, ನಾಗಪುರದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದರು. ಈ ವಿಮಾನದಲ್ಲಿ ಪೈಲಟ್‌ಗಳು ಸೇರಿದಂತೆ ೨೦೦ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಏರ್ ಏಷ್ಯಾ ಪ್ರಯಾಣಿಕರ ನಿಗದಿತ ಕಾರ್ಯಗಳ ಮೇಲಿನ ಪರಿಣಾಮ ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದೆ.