
ನವದೆಹಲಿ, ಏ.3-ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ.
ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಪೊಲೀಸರು ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಇಂದು ಹಾಜರುಪಡಿಸಿದರು.
ಬಳಿಕ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸಿಬಿಐ ಮನವಿ ಪುರಸ್ಕರಿಸಿದ ಕೋರ್ಟ್ 14 ದಿನಗಳ ಕಾಲ ಬಂಧನ ವಿಸ್ತರಣೆಗೆ ಆದೇಶಿಸಿತು.
ತನಿಖೆಯು ನಿರ್ಣಾಯಕ ಹಂತದಲ್ಲಿದೆ. ಹೀಗಾಗಿ ಸಿಸೋಡಿಯಾ ಅವರ ಬಂಧನವನ್ನು ಇನ್ನಷ್ಟು ದಿನ ವಿಸ್ತರಣೆ ಮಾಡಬೇಕು ಎಂದು ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ಕೋರ್ಟ್ಗೆ ಮನವಿ ಮಾಡಿದ್ದರು.
ಅಬಕಾರಿ ನೀರಿತಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಫೆ.26ರಂದು ಸಿಬಿಐ ಬಂಧಿಸಿತ್ತು.