ಐದು ದಿನ ರಾಜ್ಯದಲ್ಲಿ ಮಳೆ

ಬೆಂಗಳೂರು, ಏ.೮- ರಾಜ್ಯದಲ್ಲಿ ಮುಂದಿನ ಐದು ದಿನವರೆಗೂ ಮಳೆ ಗುಡುಗು ಸಹಿತ ಜೋರು ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದಾಖಲಾದ ಮಳೆಯು ಉತ್ತರ ಕರ್ನಾಟಕ ಭಾಗದ ನಾಲ್ವರು ಮೃತಪಟ್ಟಿದ್ದಾರೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವರುಣ ದೇವ ಹಲವೆಡೆ ಬೇಸಿಗೆಯ ಬಿಸಿಗೆ ತಂಪೆರೆದಿದ್ದಾನೆ. ವಿವಿಧ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದೇ ವೇಳೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಹತ್ವದ ಮುನ್ಸೂಚನೆಯೊಂದನ್ನು ಹೊರಡಿಸಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಸಾರ್ವಜನಿಕರಿಗೆ ಮುಂಗಡ ಮಾಹಿತಿ ನೀಡಿದೆ
ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳು ಅಂದರೆ ಏಪ್ರಿಲ್ ೧೨ರವರೆಗೆ ಜೋರು ಮಳೆ ಆಗುವ ಸಂಭವವಿದೆ. ಈ ಪೈಕಿ ಏಪ್ರಿಲ್ ೮ರಂದು ಒಂದು ದಿನ ಕರಾವಳಿಯ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆ ಬೀಳಲಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ.