ಕಂದಾಯ ಇಲಾಖೆ ಸಮಸ್ಯೆಗಳದ್ದೇ ಹೆಚ್ಚು ಸದ್ದು

ಸಂಜೆವಾಣಿ ನ್ಯೂಸ್
ಮೈಸೂರು: ಸೆ.26:-ಪೆÇೀಡಿ ಮಾಡಿಕೊಡಿ, ಜಮೀನಿಗೆ ರಸ್ತೆ ಕೊಡಿಸಿ, ಕೆರೆ ಒತ್ತುವರಿ ತಪ್ಪಿಸಿ ಹೀಗೆ ಬಹುತೇಕ ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳೇ ಸಚಿವರ ನೇತೃತ್ವದ ಜನತಾ ದರ್ಶನದಲ್ಲಿ ಕಂಡು ಬಂದವಲ್ಲದೆ, 379 ಅರ್ಜಿಗಳನ್ನು ಸ್ವೀಕರಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜನತಾ ದರ್ಶನದಲ್ಲಿ ರೇಷನ್ ಕಾರ್ಡ್ ಬೇಕಿದೆ. ಖಾತೆ ಬದಲಾವಣೆ ಆಗಬೇಕು. ವಾಸಕ್ಕಾಗಿ ಮನೆ ಅಗತ್ಯವಿದೆ, ವಿದ್ಯುತ್ ಕಂಬ ಅಳವಡಿಸಿಕೊಡಿ, ವ್ಯವಸಾಯಕ್ಕೆ ಕೊಳವೇ ಬಾವಿ ಕೊಡಿಸಿ, ಸಣ್ಣಪುಟ್ಟ ಕೆಲಸ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಾರೆ. ಹೀಗೆ ವಿವಿಧ ಸಮಸ್ಯೆಗಳನ್ನು ಹೊತ್ತುಬಂದ ಜನರ ಕುಂದು ಕೊರತೆಗಳನ್ನು ಆಲಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತುರ್ತಾಗಿ ಪರಿಹಾರ ಕಲ್ಪಿಸಬೇಕೆಂದು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಸಚಿವರು ಮಾತನಾಡಿ, ಜನರು ತಾಲ್ಲೂಕು ಕಚೇರಿಗೆ, ಪೆÇಲೀಸ್ ಠಾಣೆಗೆ, ಗ್ರಾಮ ಪಂಚಾಯಿತಿ ಕಚೇರಿ ಸೇರಿ ಅನೇಕ ಕೆಲಸಗಳಿಗಾಗಿ ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ತಿಂಗಳಪೂರ್ತಿ ಅಲೆಯಬಾರದು. ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಜನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಜನರೊಂದಿಗೆ ಸಂವಾದ ಮಾಡದಿದ್ದರೆ, ಅವರ ಕಷ್ಟ, ಕಾರ್ಪಣ್ಯ ಅರಿವಾಗುವುದಿಲ್ಲ. ಕಡ್ಡಾಯವಾಗಿ ತಿಂಗಳಲ್ಲಿ ಎಂಟು ದಿನ ಪ್ರವಾಸ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಸ್ಪಂದಿಸಿದರೆ ನಿಮ್ಮ ಕೆಲಸಕ್ಕೆ ಸಾರ್ಥಕತೆ ದೊರಕುತ್ತದೆ. ಜನರ ಕಷ್ಟಗಳನ್ನು ಸಕಾಲಕ್ಕೆ ಬಗೆಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಇದನ್ನು ಗಮನದಲ್ಲಿರಿಸಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ನಮ್ಮ ಜಿಲ್ಲೆಯನ್ನು ಪೆÇೀಡಿ ಮುಕ್ತ ಜಿಲ್ಲೆಯಾಗಿಸಲು ಅಭಿಯಾನ ನಡೆಸಿಬೇಕು. ಇದಕ್ಕಾಗಿ ಒಂದು ನಿರ್ದಿಷ್ಟ ಸಮಯ ನಿಗದಿಪಡಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ. ಎರಡು ವೇದಿಕೆಯನ್ನು ಮಾಡಿ ಒಂದಡೆ ಸಾರ್ವಜನಿಕರು ಮತ್ತೊಂದೆಡೆ ಅಧಿಕಾರಿಗಳು ಮುಖಾಮುಖಿಯಾಗಿ ಕುಳಿತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಸರ್ಕಾರ ಹಾಗೂ ಜಿಲ್ಲಾಡಳಿತ ಜನಸ್ನೇಹಿಯಾಗಿದೆ ಎಂಬ ಸಂದೇಶ ರವಾನಿಸಬೇಕು ಎಂದು ಸಲಹೆ ನೀಡಿದರು.
ವೃದ್ಧೆ ವೆಂಕಟಮ್ಮ (83) ತಮ್ಮ ಗಂಡುಮಕ್ಕಳಿಂದ ಜೀವನ ನಿರ್ವಹಣೆಗಾಗಿ ಪರಿಹಾರ ಕೊಡಿಸಬೇಕೆಂದು ಸಚಿವರಲ್ಲಿ ಅವಲತ್ತುಕೊಂಡರು. ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಜೀವನ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ವೆಚ್ಚವನ್ನು ನ್ಯಾಯಾಲಯದ ತೀರ್ಮಾನದಂತೆ ಕೊಡಿಸಲಾಗುವುದು ಎಂದು ಭರವಸೆ ನೀಡಿ, ಬಳಿಕ ಸ್ಥಳದಲ್ಲೇ ಸೂಕ್ತ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಿವೃತ್ತ ಸೈನಿಕ ಸಿದ್ದಣ್ಣಯ್ಯ ಸರ್ಕಾರದಿಂದ ತಮಗೆ ಬರಬೇಕಾದ ನಿವೇಶನದ ಬಗ್ಗೆ ಮನವಿ ಮಾಡಿಕೊಂಡರು. ಸೈನಿಕರು ತಮ್ಮ ಸಂಸಾರವನ್ನು ತೊರೆದು ದೇಶದ ಗಡಿಯಲ್ಲಿ ಜೀವವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸಿರುತ್ತಾರೆ. ಮೊದಲು ಅವರನ್ನು ಗೌರವಿಸಬೇಕು. ಅವರಿಗೆ ಕಾನೂನಿಕ ಪ್ರಕಾರ ಸಿಗಬೇಕಾದ ಸೌಲಭ್ಯವನ್ನು ಯಾವುದೇ ಕಾರಣಕ್ಕೂ ತಡಮಾಡದೆ ನಿವೇಶನ ದೊರಕಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಂಚಾರ ಪೆÇಲೀಸರು ಎಲ್ಲೆಂದರಲ್ಲಿ ವಾಹನ ತಡೆದು ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ವಿಧಿಸುತ್ತಾರೆ. ಇದರಿಂದ ಬಡಜನರಿಗೆ ತೊಂದರೆ ಉಂಟಾಗುತ್ತಿದೆ ವಿಚಾರ ಕುರಿತು ಮಾತನಾಡಿದರ ಸಚಿವರು, ಏಷ್ಯಾಖಂಡದಲ್ಲೇ ಹೆಚ್ಚು ಜನರು ರಸ್ತೆ ಅಪಘಾತದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿದಿನ ಶೇ 2.5 ರಷ್ಟು ಮಂದಿ ಅಪಘಾತಕ್ಕೆ ಒಳಗಾಗುತ್ತಾರೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಸಂಚಾರ ಪೆÇಲೀಸರು ಹೆಲ್ಮೆಟ್ ಹಾಕದವರಿಗೆ ದಂಡ ವಿಧಿಸುತ್ತಿದ್ದಾರೆ ಹೊರತು, ಜನರಿಂದ ಹಣ ವಸೂಲಿ ಮಾಡುವ ದುರುದ್ದೇಶವಿಲ್ಲ. ಮುಂದಿನ ದಿನಗಳಲ್ಲಿ ಹೆಲ್ಮೆಟ್ ಧರಿಸುವಂತೆ ಅಭಿಯಾನ ರೂಪದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲು ಸೂಚಿಸಲಾಗುವುದು ಎಂದು ತಿಳಿಸಿದರು.
ಅನ್ವರ್ ಎಂಬುವರು ಮಾತನಾಡಿ, ನಮ್ಮ ಕುಟುಂಬಕ್ಕೆ ರೇಷನ್ ಕಾರ್ಡ್ ಬೇಕಿದೆ. ಆಹಾರ ಧಾನ್ಯ ಪಡೆಯಲು ಇಲ್ಲದಿದ್ದರೂ, ಆರೋಗ್ಯ ತಪಾಸಣೆಗೆ ನಮಗೆ ಅಗತ್ಯವಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಈ ವಿಷಯ ಕುರಿತು ಆಹಾರ ಇಲಾಖೆಯಲ್ಲಿ ಅಧಿಕಾರಿಯನ್ನು ಕೇಳಿದಾಗ, ಇವರು ರೇಷಾನ್ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ ಎಂದು ತಿಳಿಸಿದರು.
ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ ರೇಷನ್ ಕಾರ್ಡ್ ನೀಡಲು ಸರ್ಕಾರದಿಂದ ಕೆಲವು ಮಾನದಂಡಗಳಿಗೆ ರೂಪಿಸಲಾಗಿದೆ. ಆ ನಿಯಮಗಳಿಗೆ ಅನುಗುಣವಾಗಿ ಅರ್ಹರಿಗೆ ಮಾತ್ರ ನೀಡಲಾಗುತ್ತದೆ. ಆದರೆ ನೀವು ಆರೋಗ್ಯ ಚಿಕಿತ್ಸೆಗಾಗಿ ಮನವಿ ಮಾಡಿದ್ದೀರಿ. ಇದಕ್ಕೆ ಪೂರಕವಾಗಿ ನಿಮ್ಮ ಆರೋಗ್ಯವನ್ನು ಗಮನದಲ್ಲಿರಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಮನವರಿಕೆ ಮಾಡಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಕುರಿತು ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಒಬ್ಬರ ಸ್ವತ್ತನ್ನು ಮತ್ತೊಬ್ಬರಿಗೆ ಖಾತೆ ಮಾಡಿಕೊಡುವುದು ಹಾಗೂ ನಿಯಮ ಉಲ್ಲಂಘಿಸಿ ಬಡಜನರಿಗೆ ಮೋಸ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಾಕೀತು ಮಾಡಿದರು.
ವಿಶೇಷಚೇತನೆ ಸರಿತಾ ಮಾತನಾಡಿ, ವಿಶೇಷಚೇತನರ ಶತಮಾನೋತ್ಸವ ಭವನ ಉದ್ಘಾಟನೆಯೇ ಆಗಿಲ್ಲ ಎಂಬಿತ್ಯಾದಿ ಸಮಸ್ಯೆ ತೆರೆದಿಟ್ಟರು. ಈಕುರಿತು ನನ್ನ ನೇತೃತ್ವದಲ್ಲಿ ಪ್ರತ್ಯೇಕವಾಗಿ ಅ.2 ಕ್ಕಿಂತ ಮುಂಚೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಕೇಂದ್ರೀಯ ವಿದ್ಯಾಲಯ 2021 ರಲ್ಲಿ ಮನವಿ ಸಲ್ಲಿಸಿದರು. ಇರುವೊಂದು ಸಾಲಲ್ಲ ಬೆಂಗಳೂರು ಮಾದರಿಯಲ್ಲಿ ಕೇಂದ್ರೀಯ ವಿದ್ಯಾಲಯ ತೆರೆಯರಿ ಎಂದು ಮನವಿ ಮಾಡಿದರು.
ಕೆ.ಆರ್.ನಗರ ಬೀಚನಹಳ್ಳಿಯ ಹರ್ಷಕುಮಾರ್ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.