
ಕಲಬುರಗಿ,ಜ.12: ರಾಜ್ಯದ ಕಂದಾಯ ಸಚಿವ ಆರ್.ಅಶೋಕ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜ.13 ರಂದು ಮಧ್ಯಾಹ್ನ 1.55 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವರು.
ವಿಮಾನ ನಿಲ್ದಾಣದಿಂದ ನೇರವಾಗಿ ಡಿ.ಸಿ. ಕಚೇರಿಗೆ ಆಗಮಿಸುವ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಹೊರಟು ಜ.19ಕ್ಕೆ ಪ್ರಧಾನಮಂತ್ರಿ ಕಾರ್ಯಕ್ರಮ ನಿಗದಿಯಾಗಿರುವ ಮಳಖೇಡ್ ಕಾರ್ಯಕ್ರಮ ಸ್ಥಳ ವೀಕ್ಷಿಸುವರು.
ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಹೈದ್ರಾಬಾದಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.