ಕರಿಕಾನು ಗುಡ್ಡದ ಮೇಲೊಂದು ಫಸ್ಟ್ ಲುಕ್  ಬಿಡುಗಡೆ

ಭರವಸೆಯ ಕಲಾವಿದ ಪ್ರಮೋದ್ ಶೆಟ್ಟಿ ನಾಯಕನಾಗಿರುವ  ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’  ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಒಂದು ಊರಿನಲ್ಲಿ ಆದ ಅಪಾರ್ಥ, ಅನಾಹುತವಾಗಿ, ಅನಾಹುತ, ಅಧಿಕ ಪ್ರಸಂಗವಾಗಿ ನಡೆಯುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ವಡ್ಡಾರಾಧಕ ಹಾಗೂ ಶಬರಿ ಎನ್ನುವ ಎರಡು ಕಿರು ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ಪ್ರತಿಭೆ ಅನೀಶ್ ಶರ್ಮ ಆಕ್ಷನ್ ಕಟ್ ಹೇಳಿದ್ದಾರೆ.

ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆಜಿ ಕೃಷ್ಣಮೂರ್ತಿ ಚಂದ್ರಕಲಾ ಚಿತ್ರದ ಭಾಗವಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಇಡುವಾಣಿ  ಹಳ್ಳಿಯಲ್ಲಿ ಚಿತ್ರ ಚಿತ್ತರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರೀಕರಿಸಲಾಗಿದೆ. ಸುಮತ್ ಶರ್ಮಾ ಛಾಯಾಗ್ರಹಣ, ಚೇತನ್ ಕುಮಾರ್ ಸಂಗೀತ  ಚಿತ್ರಕ್ಕಿದೆ.

ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದ್ದಾರೆ,   ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.