ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಚಿತ್ರದುರ್ಗದ ಆರು ಕ್ಷೇತ್ರದಲ್ಲಿ ಸ್ಪರ್ಧೆ

ಚಿತ್ರದುರ್ಗ, ಏ.ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜಿಲ್ಲೆ ಹಾಗೂ ರಾಜ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ‌ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲೆಯ ಆರು ಕ್ಷೇತ್ರಗಳು ಸೇರಿದಂತೆ ರಾಜ್ಯದ 224 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಪಕ್ಷದ ಜಿಲ್ಲಾ ಸಂಚಾಲಕ ಮಹೇಶ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಲ್ಲಿಯವರೆಗೂ ಆಳ್ವಿಕೆ ಮಾಡಿದಂತಹ ವಿವಿಧ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥದ ರಾಜಕಾರಣ ಮಾಡಿ, ಜಿಲ್ಲೆ ಹಾಗೂ ರಾಜ್ಯವನ್ನು ಅಭಿವೃದ್ಧಿಯಿಂದ ಕುಂಠಿತ ಮಾಡಿದ್ದಾರೆ. ಇವರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ ಎಂದು‌ ತಿಳಿದಿರುವ ಕೆ ಆರ್ ಎಸ್ ಪಕ್ಷ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಸಿ ಜನಪರ ಸೇವೆ ಮಾಡಲು ಮುಂದಾಗಿದ್ದೆವೆ ಎಂದರು.ಈಗಾಗಲೇ ಪಕ್ಷದ ವತಿಯಿಂದ ಬೆಂಗಳೂರು, ತುಮಕೂರು, ಹಾಸನ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿ ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾ ಬಂದಿದ್ದೆವೆ. ಪಕ್ಷದ ಮೊದಲ ಪಟ್ಟಿಯಲ್ಲಿ ೪೭ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದ್ದು, ಎರಡನೆ ಪಟ್ಟಿಯಲ್ಲಿ ೭೬ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಹೆಸರನ್ನು ಸಿದ್ದಪಡಿಸಲಾಗಿದ್ದು, ಇದರಲ್ಲಿ ಮಹಿಳೆಯರಿಗೆ ಅದ್ಯತೆ ನೀಡಲಾಗುತ್ತಿದೆ ಎಂದರು.ಜಿಲ್ಲೆಯ ೪ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಹೊಸದುರ್ಗ ಕ್ಷೇತ್ರದಿಂದ ತನುಜಾ, ಚಿತ್ರದುರ್ಗ ಕ್ಷೇತ್ರದಿಂದ ಚಂದ್ರಣ್ಣ, ಹಿರಿಯೂರುವಿನಯ್ ಎಸ್. ಚಳ್ಳಕೆರೆಯಿಂದ ಬೋಜರಾಜ ಸಿ. ಇವರನ್ನು ಆಯ್ಕೆ ಮಾಡಲಾಗಿದ್ದು, ಉಳಿದ ಎರಡು ಕ್ಷೇತ್ರಕ್ಕೂ ಶೀಘ್ರವೇ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.