ಕಾಡಾನೆ ಜೊತೆ ಸೆಲ್ಪಿ: 20 ಸಾವಿರ ದಂಡ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.07- ಇರಲಾರದವರು ಇರುವೆ ಬಿಟ್ಟುಕೊಂಡರು ಎಂಬ ಗಾದೆಯಂತಾಗಿದೆ ಈ ಪ್ರವಾಸಿಗರ ಸ್ಥಿತಿ. ಸುಮ್ಮನೆ ಇರದೆ ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡಿದ್ದಾರೆ. ಮಾಡಿದ ತಪ್ಪಿಗೆ ತಂಡವನ್ನೂ ಕಟ್ಟಿದ್ದಾರೆ.
ಹೌದು, ಕಾಡಾನೆ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಂದ ತಲಾ 10 ಸಾವಿರರೂ. ದಂಡ ಕಕ್ಕಿಸಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ಹಾಸನೂರು ಬಳಿ ನಡೆದಿದೆ.
ತೆಲಂಗಾಣದ ನಿಜಾಂಪೇಟೆ ಮೂಲದ ದಿಲೀಪ್ ಕುಮಾರ್ (42) ಹಾಗೂ ಶ್ಯಾಂಪ್ರಸಾದ್(31) ದಂಡಕಟ್ಟಿರುವ ಪ್ರವಾಸಿಗರು. ಬುಧವಾರ ಸಂಜೆ ಕಾರಿನಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಮೂಲಕ ಇವರು ಕೊಯಮತ್ತೂರಿಗೆ ತೆರಳುವಾಗ ಹಾಸನೂರು ಬಳಿ ಆನೆ ನಿಂತಿದ್ದನ್ನು ಕಂಡಿದ್ದಾರೆ.
ಕಾರಿನಿಂದ ಇಳಿದ ಈ ಇಬ್ಬರು ವ್ಯಕ್ತಿಗಳು ಕಾಡಾನೆ ಯತೀರಾ ಸಮೀಪ ಹೋಗಿ ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದನ್ನು ಗಸ್ತು ತಿರುಗುತ್ತಿದ್ದ ತಮಿಳುನಾಡಿನ ಅರಣ್ಯ ಇಲಾಖೆ ಸಿಬ್ಬಂದಿ ಗಮನಿಸಿದ್ದಾರೆ.
ಇನ್ನೇನೂ ವಿಚಾರಿಸಬೇಕು ಎನ್ನುವಷ್ಟರಲ್ಲಿ ಕಾರು ಹತ್ತಿಪರಾರಿಯಾಗಿದ್ದರು.
ಬಳಿಕ ಬಣ್ಣಾರಿ ಚೆಕ್ ಪೆÇೀಸ್ಟ್‍ಗೆ ಇವರ ಮಾಹಿತಿ ತಿಳಿಸಿ ಅಲ್ಲಿಕಾರನ್ನು ಅಡ್ಡ ಹಾಕಿ ವಿಚಾರಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೇಜವಾಬ್ದಾರಿತನ ತೋರಿದ ಇಬ್ಬರಿಗೂ ತಲಾ 10 ಸಾವಿರರೂ. ದಂಡ ವಿಧಿಸಿದ ಅರಣ್ಯಾಧಿಕಾರಿಗಳು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.