ಲಕ್ಷ್ಮೇಶ್ವರ,ಜೂ.24: ಪಟ್ಟಣದಲ್ಲಿ ಕಳೆದ ಎರಡು ವರ್ಷಗಳಿಂದ ಅರ್ಧಕ್ಕೆ ನಿಂತಿರುವ ಕನ್ನಡ ಸಾಹಿತ್ಯ ಭವನದ ಕಾಮಗಾರಿಯನ್ನು ಶಾಸಕ ಚಂದ್ರು ಲಮಾಣಿ ಅವರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕದ ಅಧ್ಯಕ್ಷ ಈಶ್ವರ್ ಮೆಡ್ಲೇರಿಯವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ನೆನೆಗುದಿಗೆ ಬಿದ್ದಿರುವ ಕಟ್ಟಡವನ್ನು ಪೂರ್ಣಗೊಳಿಸಲು ಅನುದಾನ ಒದಗಿಸಿಕೊಡುವಂತೆ ಮನವಿ ಮಾಡಿದರು ಇದೇ ಸಂದರ್ಭದಲ್ಲಿ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಅವರನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.