(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ಪಾಕಿಸ್ತಾನ ಮತ್ತು ಭಾರತ ದೇಶಗಳ ನಡುವೆ 1996 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಜುಲೈ 26 ರಂದು ಭಾರತವು ವಿಜಯಶಾಲಿಯಾಗಿತ್ತು.
ಈ ಸವಿ ನೆನಪಿಗಾಗಿ ಇಂದು ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯ್ತು.
ಎಸ್ಪಿ ಕಚೇರಿ ಬಳಿ ಇರುವ ಸ್ಮಾರಕದ ಬಳಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರದ ಬಿಜೆಪಿಯ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ. ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್ ಮೊದಲಾದವರು ಭಾಗವಹಿಸಿ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ನಮಿಸಿದರು.