ಕಾಲುವೆಯಲ್ಲಿ ಕೊಚ್ಚಿಹೋದ ಚುನಾವಣೆ ಕರ್ತವ್ಯನಿರತ ಪೌರ ಕಾರ್ಮಿಕ

ಮಸ್ಕಿ( ರಾಯಚೂರು ಜಿಲ್ಲೆ): ಚುನಾವಣೆ ಕರ್ತವ್ಯ ನಿರತ ಪೌರ ಕಾರ್ಮಿಕ ಸ್ನಾನಕ್ಕಾಗಿ ಕಾಲುವೆಯಲ್ಲಿ ಇಳಿದಾಗ ಕೊಚ್ಚಿಹೋದ ಘಟನೆ ಇಂದು ಪಟ್ಟಣದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಮಸ್ಕಿ ನಿವಾಸಿ ಜಂಬಯ್ಯ ರಾಯಚೂರು (45) ಮೃತ ಪೌರಕಾರ್ಮಿಕ. ಕೆಲ ದಿನಗಳ ಹಿಂದೆಯಷ್ಟೇ ನಡೆದ ಆನ್ ಲೈನ್ ನೇಮಕಾತಿಯಲ್ಲಿ ಆಯ್ಕೆಯಾಗಿ ಪಟ್ಟಣದ ಪುರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದರು.


ಗುರುವಾರ ರಾತ್ರಿ ರಾಯಚೂರಿನಿಂದ ಮತಯಂತ್ರಗಳನ್ನು ತೆಗೆದುಕೊಂಡು ಬಂದು ಪಟ್ಟಣದ ದೇವನಾಂಪ್ರಿಯ ಕಾಲೇಜಿನ ಸ್ಟ್ರಾಂಗ್ ರೂಮ್ ನಲ್ಲಿ ಇಳಿಸುವ ಕೆಲಸ ಮಾಡಿದ್ದರು. ಶುಕ್ರವಾರ ಬೆಳಿಗ್ಗೆ ತನ್ನ ಮತ್ತೊಬ್ಬ ಸಿಬ್ಬಂದಿಯ ಜೊತೆ ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದರು.
ಜೊತೆಯಲ್ಲಿದ್ದ ಮತ್ತೊಬ್ಬ ಕಾರ್ಮಿಕ ಹರಿದು ಹೋಗುತ್ತಿದ್ದ ಪೌರ ಕಾರ್ಮಿಕನ ರಕ್ಷಣೆ ಮಾಡಲು ಯತ್ನಿಸಿದರು ಪ್ರಯೋಜನವಾಗಿಲ್ಲ.
ಸುದ್ದಿ ತಿಳಿಯುತ್ತಲೇ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲಿಂಗಸುಗೂರು ಹಾಗೂ ಸಿಂಧನೂರಿನಿಂದ ಆಗ್ನಿ ಶಾಮಕ ತಂಡಗಳು ಹಾಗೂ ಪೌರ ಕಾರ್ಮಿಕರು ಶೋಧ ಕಾರ್ಯ ನಡಿಸಿದ್ದಾರೆ.