
ಸಂಜೆವಾಣಿ ನ್ಯೂಸ್
ಮೈಸೂರು: ಆ.22:- ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ನ್ಯಾಯಾಲಯದ ನಿರ್ಧಾರದಂತೆ ನೀರು ಬಿಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ಯಾವುದೇ ಸರ್ಕಾರ ಕೆಲಸ ಮಾಡುವುದಿಲ್ಲ. ರಾಜ್ಯದ ರೈತರ ಹಿತದೃಷ್ಟಿಯಿಂದಲೇ ನಮ್ಮ ಸರ್ಕಾರವೂ ಕೆಲಸ ಮಾಡಲಿದೆ ಎಂದರು.
ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಗಲೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಹೀಗಾಗಿ ಬಿಜೆಪಿ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಮಳೆಯಾಗದ ಸಂದರ್ಭದಲ್ಲಿ ಸಂಕಷ್ಟ ಸೂತ್ರದಡಿ ನೀರು ಹಂಚಿಕೆ ಮಾಡಿಕೊಳ್ಳಬೇಕಿದೆ. ಸಂಕಷ್ಟ ಸೂತ್ರದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಆ.23ರಂದು ನಡೆಯುವ ಸರ್ವ ಪP?ಷÀಗಳ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ನೂರಾರು ವರ್ಷಗಳಿಂದ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ. ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಯಾರು ಯಾರಿಗೆ ಎಷ್ಟೆಷ್ಟು ನೀರು ಹಂಚಿಕೆ ಆಗಬೇಕೆಂಬುದು ತೀರ್ಮಾನವಾಗಿದೆ. ಕೋರ್ಟ್ನ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿz?ದÉ?ವೆ ಎಂದರು.
ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟ ಹಂಚಿಕೊಳ್ಳಬೇಕಿದೆ. ಈ ಬಾರಿ ಕಡಿಮೆ ಮಳೆ ಬಿದ್ದಿದೆ. ನಮ್ಮ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರಾ ಕಡಿಮೆ ಇದೆ. ಕಟ್ಟು ಮಾದರಿಯಲ್ಲಿ ನೀರು ನೀಡಬೇಕೆಂದು ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಾಸಕ ತನ್ವಿರ್ ಸೇಠ್ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಾಧಿಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕಿದೆ. ಇದೇ ಕಾರಣಕ್ಕೆ ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಸರ್ವ ಪಕ್ಷ ಸಭೆಯಲ್ಲಿ ಮುಂದೇನು ಮಾಡಬೇಕೆಂದು ತೀರ್ಮಾನಿಸಲಾಗುತ್ತದೆ. ಕಾವೇರಿ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು. ಸರ್ವ ಪಕ್ಷÀÀಗಳ ಸಭೆಗೆ ಆಹ್ವಾನ ಬಂದರೆ ಹೋಗುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನಲೆಗೆ ಬಂದಿರುವ ಹಿನ್ನೆಲೆ. ಜನತೆ ನಮಗೆ 135 ಸ್ಥಾನ ಕೊಟ್ಟು ಪೂರ್ಣ ಬಹುಮತ ನೀಡಿz?ದÁರೆ. ಈ ಸಂದರ್ಭದಲ್ಲಿ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ ಎಂದರು.
ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿದೆ. ಆದರೂ ರಾಜೀನಾಮೆ ನೀಡಿ ಜನರ ಬಳಿಗೆ ಹೋಗೋದು ಎಷ್ಟರ ಮಟ್ಟಿಗೆ ಸರಿ ಆಪರೇಷನ್ ಕಮಲ ಅನ್ನೋದನ್ನು ತಂದಿದ್ದೆ ಬಿಜೆಪಿಯವರು. ಈ ವಿಚಾರಕ್ಕೆ ಹೆಚ್ಚಿನ ಮನ್ನಣೆ ನೀಡುವುದಿಲ್ಲ ಎಂದು ಹೇಳಿದರು.