
ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಮೇ 24 :- ಕೂಡ್ಲಿಗಿ ವಿಧಾನಸಭಾ ಚುನಾವಣೆಯ ಎಎಪಿ ಅಭ್ಯರ್ಥಿಯಾಗಿದ್ದ ನಾರಿ ಶ್ರೀನಿವಾಸರವರು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಡಾ ಶ್ರೀನಿವಾಸ ಇವರಿಗೆ ಮಂಗಳವಾರದಂದು ಬೆಂಗಳೂರಿನ ಶಾಸಕರ ಭವನದಲ್ಲಿ ಭೇಟಿಯಾಗಿ ಅಭಿನಂದನೆ ತಿಳಿಸಿ ಹಾಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆ ನೀಡಿದರು.
ಮಂಗಳವಾರ ಬೆಂಗಳೂರಿನ ಶಾಸಕರ ಭವನದಲ್ಲಿ ಎಎಪಿ ಅಭ್ಯರ್ಥಿ ನಾರಿ ಶ್ರೀನಿವಾಸ ಭೇಟಿ ಮಾಡಿ ಕೈಕುಲುಕಿ ಅಭಿನಂದನೆ ತಿಳಿಸಿದ ಅವರು ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪಿಗೆ ಪರಾಜಿತ ಅಭ್ಯರ್ಥಿಗಳು ತಲೆಬಾಗಲೇ ಬೇಕು ಈ ಬಾರಿ ಕೂಡ್ಲಿಗಿ ಕ್ಷೇತ್ರದಲ್ಲಿ ಯಾವ ಪಕ್ಷದ ವಿರುದ್ಧ ಅವಹೇಳನಕಾರಿ ಭಾಷಣ ಮಾಡದೆ ಎಲ್ಲಾ ಅಭ್ಯರ್ಥಿಗಳು ಆರೋಗ್ಯಕರ ಚುನಾವಣೆ ನಡೆಸಿದ್ದು ಸಂತಸ ತಂದಿದೆ ಅಲ್ಲದೆ ಕೂಡ್ಲಿಗಿ ಕ್ಷೇತ್ರ ಬಹಳಷ್ಟು ಹಿಂದುಳಿದ ಕ್ಷೇತ್ರವಾಗಿದ್ದು ಮಳೆಯಾಶ್ರಿತ ಪ್ರದೇಶವಾಗಿರುವುದರಿಂದ ಕೆರೆ ನೀರು ತುಂಬಿಸುವ ಯೋಜನೆ ಪೂರ್ಣಪ್ರಮಾಣದಲ್ಲಿ ಮುಗಿದಲ್ಲಿ ರೈತರ ಬದುಕು ಹಸನಾಗುವುದು ಅಲ್ಲದೆ ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದೂ ಇದನ್ನು ಪರಿಹರಿಸಲು ನೂತನ ಶಾಸಕರಾದ ಡಾ ಶ್ರೀನಿವಾಸ ಕ್ಷೇತ್ರದಲ್ಲಿ ಕೈಗಾರಿಕೆ ತೆರೆದರೆ ಅನುಕೂಲವಾಗಲಿದೆ ಎಂದು ನೂತನ ಶಾಸಕರಿಗೆ ಎ ಎ ಪಿ ಅಭ್ಯರ್ಥಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರುಸಿದ್ದನಗೌಡ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿ ಜಿಂಕಲ್ ನಾಗಮಣಿ ಉಪಸ್ಥಿತರಿದ್ದರು.
One attachment • Scanned by Gmail