ಕೂಲಹಳ್ಳಿ ಗ್ರಾಮದಲ್ಲಿ ಸ್ವೀಪ್ ಕಾರ್ಯಕ್ರಮದ ಜಾಗೃತಿ ಜಾಥಾ

ಹರಪನಹಳ್ಳಿ.ಮಾ.೩; ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಸ್ವೀಪ್ ಕಾರ್ಯಕ್ರಮದ ಜಾಗೃತಿ ಜಾಥಾಮತದಾನ ಮಾಡುವುದು ಎಲ್ಲಾರೂ ಹಕ್ಕು ಆಗಿರುವುದರಿಂದ, ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಸಹಾಯಕ ಚುನಾವಣಾ ಅಧಿಕಾರಿಯೂ ಆದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಆರ್.ಪ್ರಕಾಶ್ ಕರೆ ನೀಡಿದರು.ತಾಲೂಕಿನ ಕೂಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಲಹಳ್ಳಿ ಗ್ರಾಮದ ಗೋಣಿ ಬಸವೇಶ್ವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಭಾರತ ದೇಶವು ಇಡೀ ಪ್ರಪಂಚದಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ. ಆದರೆ, ಮತದಾನ ಮಾಡುವಲ್ಲಿ ಜನರು ನಿರ್ಲಕ್ಷö್ಯ, ಬೇಜವಾಬ್ದಾರಿ ತೋರುತ್ತಿರುವುದು ಬೇಸರದ ಸಂಗತಿ. ದೇಶದಲ್ಲಿ ಸಾಕಷ್ಟು ವಿದ್ಯಾವಂತರೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುತ್ತಿಲ್ಲ. ಈ ಬಗ್ಗೆ ವರದಿಗಳು ಬರುತ್ತಲೇ ಇವೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಯುವಜನತೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಹಾಗೂ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕು ಎಂದು ತಿಳಿಸಿದರು.2023 ಸಾಲಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಮತದಾರರ ನೋಂದಣಿ ಕಾರ್ಯ ಹಾಗೂ ಕಡ್ಡಾಯ ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇನ್ನೂ ಈಗಾಗಲೇ ತಾಲೂಕಾದ್ಯಂತ ಸ್ವೀಪ್ ಕಾರ್ಯಕ್ರಮಗಳು ನಡೆಯುತ್ತಿದೆ. ಅದರಲ್ಲೂ ಜಾತ್ರೆ, ಉತ್ಸವ, ಶಾಲಾ-ಕಾಲೇಜು, ನರೇಗಾ ಕಾಮಗಾರಿ ಸ್ಥಳಗಳಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯುತ್ತವೆ. ಇದರಿಂದ ಮತದಾರರ ನೋಂದಣಿ ಕಾರ್ಯ ಬಹಳ ಶೀಘ್ರವಾಗಿ ಆಗಬೇಕಿದೆ. ಈ ಬಗ್ಗೆ ಜಾಗೃತಿ ಕಾರ್ಯವೂ ಎಲ್ಲಡೆ ನಡೆಯುತ್ತಿದೆ ಎಂದು ತಿಳಿಸಿದರು.