
ಮೂಡುಬಿದಿರೆ: ಕೊಂಪದವು ತಿರುವಿನಲ್ಲಿ ಭಾನುವಾರ ಬೆಳಗ್ಗೆ ಬೈಕ್ ಹಾಗೂ ಬೋರ್ವೆಲ್ ಲಾರಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಮುಚ್ಚೂರು ಕಾನ ನಿವಾಸಿ, ಕೂಲಿ ಕಾರ್ಮಿಕ ಚಂದ್ರಶೇಖರ್ ಗೌಡ (೩೨) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ಕುಡುಪು ದೇವಸ್ಥಾನದ ಷಷ್ಠಿ ಜಾತ್ರೆಗೆ ಹೋಗಿದ್ದು, ಅಲ್ಲಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆಗೆ ಕೊಂಪದವು ತಿರುವಿನಲ್ಲಿ ಬೈಕ್ ಬೋರ್ವೆಲ್ ಲಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಚಂದ್ರಶೇಖರ್ ತಲೆ ಭಾಗಕ್ಕೆ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.