ಕಲಬುರಗಿ :ಜು.28: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಕಲಬುರಗಿ ಜಿಲ್ಲೆಯ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾವ ಅಕ್ಕೋಣೆ, ಉಪಸಭಾಪತಿ ಅರುಣಕುಮಾರ ಲೋಯಾ, ಗೌ. ಕಾರ್ಯದರ್ಶಿ ರವೀಂದ್ರ ಶಾಬಾದಿ, ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಯಾದ ಡಾ. ಚಂದ್ರಕಾಂತ ನರಿಬೋಳ, ಇವರುಗಳಿಂದ ಕ್ಷಯ ರೋಗಿಗಳಿಗೆ ಆಹಾರ ಕಿಟ್ಗಳನ್ನು ಸಂಸ್ಥೆಯ ಕಾರ್ಯಲಯದಲ್ಲಿ ವಿತರಿಸಲಾಯಿತು,
ಈ ಸಂದರ್ಭದಲ್ಲಿ ಮಂಜುನಾಥ ಕಂಬಾಳಿಮಠ, ವಿಜಯಕುಮಾರ ಕಟ್ಟಿಮನಿ, ಆರೋಗ್ಯ ಇಲಾಖೆಯ ನೌಕರರು ಉಪಸ್ಥಿತರಿದ್ದರು.