
ಶ್ರೀನಿವಾಸಪುರ,ಮೇ,೨೬-ಬೆಂಗಳೂರು ಕಳಾಸಿಪಾಳ್ಯಂನಿಂದ ಹೊರಟು ಹೆಚ್ ಕ್ರಾಸ್ ಮದನಪಲ್ಲಿ ಮಾರ್ಗವಾಗಿ ತಿರುಪತಿಗೆ ಹೋಗುತಿದ್ದ ಖಾಸಗಿ ಬಸ್ಸೊಂದು ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಅಪಘಾತವಾಗಿದೆ, ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಗಾಯಗಳಾಗಿದ್ದು ಅವರಲ್ಲಿ ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ೧೦ ಗಂಟೆಗೆ ರಾಯಲ್ಪಾಡು ಗೆಟ್ನಿಂದ ಹಾದು ಹೋದ ಭಾರತಿ ಬಸ್ ಸರ್ವೀಸ್ ಆಂಧ್ರ ಪ್ರದೇಶದ ಮದನಪಲ್ಲಿ ವ್ಯಾಪ್ತಿಯ ಬಾರ್ಲಪಲ್ಲಿ ಬಳಿ ತಿರುವಿನಲ್ಲಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಅಪಘಾತದಲ್ಲಿ ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದು ೧೦ಕ್ಕೂ ಹೆಚ್ಚು ಪ್ರಯಾಣಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆಯೆಂದು ಹೇಳಲಾಗಿದೆ.
ಬಸ್ನಲ್ಲಿದ್ದ ಬಹುತೇಕ ಪ್ರಯಾಣಿಕರು ಬೆಂಗಳೂರಿನವರಾಗಿದ್ದು ತಿರುಪತಿ ಹಾಗೂ ಮದನಪಲ್ಲಿಗೆ ಹೋಗುತ್ತಿದ್ದರು ಎನ್ನಲಾಗಿದೆ ಅಪಘಾತ ಸ್ಥಳಕ್ಕೆ ಮದನಪಲ್ಲಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದನಪಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸ್ ಅಪಘಾತದ ಗಾಯಾಳುಗಳನ್ನು ಮದನಪಲ್ಲಿ ಮಾಜಿ ಶಾಸಕ ದೊಮ್ಮಲಪಾಟಿ ರಮೇಶ್ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
.