ಚಂದ್ರಂಪಳ್ಳಿ ಜಲಾಶಯದಿಂದ ನದಿಗೆ ನೀರು ಬಿಡುಗಡೆಯ ಮುನ್ನೆಚ್ಚರಿಕೆ

ಕಲಬುರಗಿ,ಜು.21:ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಬರುತ್ತಿದೆ. ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದ್ದು, ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟಿನ ಕೋಡಿಯ ಗೇಟ್‍ಗಳ ಮೂಲಕ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಚಂದ್ರಂಪಳ್ಳಿ ಯೋಜನೆಯ ಚಂದಾಪುರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಚಂದ್ರಂಪಳ್ಳಿ ಆಣೆಕಟ್ಟಿನ ನದಿ ಪಾತ್ರದ ರೈತರು, ಸಾರ್ವಜನಿಕರು, ರೈತ ಮಹಿಳೆಯರು ಹಾಗೂ ದನಕರುಗಳನ್ನು ಮೇಯಿಸುವವರು ಹಳಕ್ಕೆ ಇಳಿದು ದನಕರುಗಳಿಗೆ ನೀರು ಕುಡಿಸಬಾರದು. ಮೀನು ಹಿಡಿಯಬಾರದು, ಬಟ್ಟೆ ಒಗೆಯುದಾಗಲಿ ಮಾಡಬಾರದು. ಇನ್ನಿತರ ಯಾವುದೇ ಕಾರ್ಯಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಸಾರ್ವಜನಿಕ ಆಸ್ತಿಗಳಿದ್ದಲ್ಲಿ ಮುಂಜಾಗೃತೆಯಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.