
ತೂತು ಮಡಿಕೆ ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ, ನಿರ್ದೇಶಕ ಚಂದ್ರಕೀರ್ತಿ ಇದೀಗ “ ಹುಲಿಯಾ” ಅನ್ನುತ್ತಿದ್ದಾರೆ. ಹೀಗಾಗಿ ಕನ್ನಡದ 50ಕ್ಕೂ ಹೆಚ್ಚು ಕಲಾವಿದರು ಚಂದ್ರಕೀರ್ತಿಗೆ ಸಾಥ್ ನೀಡಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದಾರೆ.
ಈ ಮೂಲಕ ಮತ್ತೊಮ್ಮೆ ಹುಲಿಯಾ ಚಿತ್ರ ಅದೇ ಹೆಸರಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಈ ಹಿಂದೆ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆಯ `ಹುಲಿಯಾ’ ಚಿತ್ರ ಮಾಡಿದ್ದರು.
ಚಿತ್ರದ ಶೀರ್ಷಿಕೆ ಮರುಬಳಕೆ ಮಾಡಿಕೊಂಡು ಹೊಸ ಚಿತ್ರ ತಯಾರಾಗುತ್ತಿದೆ. ತೂತುಮಡಿಕೆ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಯುವ ನಿರ್ದೇಶಕ ಕಂ ನಟ ಚಂದ್ರಕೀರ್ತಿ ಎರಡನೇ ಹೆಜ್ಜೆಗೆ `ಹುಲಿಯಾ’ ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್ ಅವರ ಆಶೀರ್ವಾದೊಂದಿಗೆ ಶುರುವಾಗುತ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೆÇೀಸ್ಟರ್ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಏಕಕಾಲಕ್ಕೆ ಬಿಡುಗಡೆ ಮಾಡಿ ಶುಭ ಹಾರೈಸಿದ್ಧಾರೆ
ಸಿಲಿಕಾನ್ ಸಿಟಿ, ಕಿಸ್, ಮೂಕವಿಸ್ಮಿತ, ಬೆಂಕಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಚಂದ್ರಕೀರ್ತಿ ತೂತುಮಡಿಕೆ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಮೊದಲ ಚಿತ್ರದಲ್ಲಿಯೇ ಗಮನಸೆಳೆದಿದ್ದ ಅವರಿಗೆ ಹುಲಿಯಾ ಮೂಲಕ ಲವ್ ಹಾಗೂ ಆಕ್ಷನ್ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರನ್ನು ರಂಜಿಸಲು ಅಣಿಯಾಗುತ್ತಿದ್ದಾರೆ.
ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಚಂದ್ರಕೀರ್ತಿ ನಾಯಕನಾಗಿಯೂ ನಟಿಸುತ್ತಿದ್ದಾರೆ. ಹುಲಿಯಾ ಪೆÇೀಸ್ಟರ್ ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ತೂತುಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್, ಮಧು ರಾವ್ ಹಾಗೂ ವಸಂತ್ ವಲ್ಲಭ್ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ.
ಸ್ವಾಮಿನಾಥನ್ ಆರ್ ಕೆ ಸಂಗೀತ, ಭಜರಂಗಿ, ವೇದ ಹಾಗೂ ಬೆಲ್ ಬಾಟಂ ಸಂಭಾಷಣೆಗಾರ ರಘು ನಿಡುವಳ್ಳಿ ಮಾತು ಚಿತ್ರಕ್ಕಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಪೆÇೀಸ್ಟರ್ ರಿಲೀಸ್ ಮಾಡಿರುವ ಹುಲಿಯಾ ಚಿತ್ರತಂಡ ಶೀಘ್ರದಲ್ಲಿ ಉಳಿದ ತಾಂತ್ರಿಕ ಹಾಗೂ ತಾರಾಬಳಗದ ಚಿತ್ರತಂಡ ಬಗ್ಗೆ ಮಾಹಿತಿ ನೀಡಲಿದೆ.