
ಚಾಮರಾಜನಗರ, ಏ.05- ಪ್ರವಾಸಿಗರಿದ್ದ ಬμÉ್ಟೂಂದು ಬೈಕ್ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಇಳಿದ ಘಟನೆಗುಂಡ್ಲುಪೇಟೆ ಪಟ್ಟಣದ ಮೈಸೂರು-ಊಟಿ ಹೆದ್ದಾರಿಯಲ್ಲಿರುವ ಅಸ್ಸಿಸಿ ಆಸ್ಪತ್ರೆ ಬಳಿ ಇಂದು ನಡೆಯಿತು. ಘಟನೆಯಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲು ಮುರಿದಿದೆ.
ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಗ್ರಾಮದರಾಜು (45) ಮೃತ ದುರ್ದೈವಿ. ಕಾಲು ಮುರಿತಕ್ಕೊಳಗಾದ ವ್ಯಕ್ತಿಯನ್ನು ತಾಲೂಕಿನ ಕಿಲಗೆರೆ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅರುಣಾಚಲ ಪ್ರದೇಶದ ಮೂಲದ ಚಾಲಕನನ್ನು ಪೆÇಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಯಂತ್ರಣ ತಪ್ಪಿಲಾರಿ ಪಲ್ಟಿ: ನಿಯಂತ್ರಣತಪ್ಪಿದ ಸರಕು ತುಂಬಿದ ಲಾರಿಯೊಂದು ಮೈಸೂರು- ಊಟಿ ಹೆದ್ದಾರಿ ಹಾದುಹೋಗುವ ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಸರಕು ಚೀಲಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಬುದ್ಧಿಮಾಂದ್ಯನಿಂದ ವಾಹನಗಳಿಗೆ ಕಲ್ಲೇಟು: ಮಾನಸಿಕ ಅಸ್ವಸ್ಥನೊಬ್ಬರಂಪ ನಡೆಸಿರುವ ಘಟನೆ ಚಾಮರಾಜನಗರದಲ್ಲಿಂದು ನಡೆಯಿತು. ಈತ ತನ್ನೆದುರಿಗೆ ಬರುತ್ತಿದ್ದ ವಾಹನಗಳಿಗೆ ಕಲ್ಲೆಸೆದಿದ್ದು ಹಲವು ವಾಹನಗಳ ಗಾಜು ಪುಡಿಯಾಗಿದೆ. ಪೆÇಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಬಕಾರಿ ದಾಳಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿಯಾಗಿದ್ದು, ಚಾಮರಾಜನಗರ ಜಿಲ್ಲಾ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದೆ. ಬಸ್ ಮೂಲಕ ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ಪೆÇಲೀಸರು ಬಂಧಿಸಿದ್ದಾರೆ. ನಾಗರಾಜು ಬಂಧಿತ ಆರೋಪಿ. ಈತ ಮೈಸೂರಿನಿಂದ ಎರಡು ಚೀಲಗಳಲ್ಲಿ ಮದ್ಯ ತರುತ್ತಿದ್ದುದನ್ನು ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು 10 ಸಾವಿರ ಮೌಲ್ಯದ 26.65 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.