ಚುನಾವಣಾ ಅಕ್ರಮ ತಡೆಗೆ ವಿವಿಧ ತಂಡಗಳ ರಚನೆ


ಗದಗ, ಮಾ 25 : ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ಜರುಗಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯು ಆಗಿರುವ ವೈಶಾಲಿ ಎಂ.ಎಲ್. ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತಂಡಗಳನ್ನು ರಚಿಸಲಾಗಿದೆ ಎಂದರು. ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ 17 ಚೆಕ್ ಪೆÇೀಸ್ಟಗಳನ್ನು ಸ್ಥಾಪಿಸಲಾಗಿದ್ದು ದಿನದ ಇಪ್ಪತ್ತನಾಲ್ಕು ಗಂಟೆ ಕಾರ್ಯನಿರ್ವಹಿಸುವ ಪ್ರತಿ ಚೆಕ್ ಪೆÇೀಸ್ಟಗೆ 3 ಜನ ಅಧಿಕಾರಿ ಹಾಗೂ ಪೆÇೀಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮಾದರಿ ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಪಾಲನೆಗೆ ಸಂಬಂಧಿಸಿದಂತೆ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 9 ರಂತೆ ಒಟ್ಟು 36 ಸಂಚಾರಿ ದಳ, 12 ವೀಡಿಯೋ ಕಣ್ಗಾವಳು ತಂಡ ಹಾಗೂ 4 ವೀಡಿಯೋ ವಿಚಕ್ಷಣಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇಡಲು ಒಟ್ಟು 8 ಲೆಕ್ಕ ತಂಡಗಳನ್ನು ಹಾಗೂ 4 ಜನ ಸಹಾಯಕ ವೆಚ್ಚ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ.

ಮತದಾನದ ಮಹತ್ವ ಹಾಗೂ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕರ ಅಧ್ಯಕ್ಷತೆಯಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಳೆದ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾದಂತಹ ಮತಗಟ್ಟೆಗಳಲ್ಲಿ ಮನೆ ಮನೆ ಭೇಟಿ ನೀಡಿ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೆರೇಪಸಲಾಗುತ್ತಿದೆ. ಅಲ್ಲದೇ ವಿಧ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿದ್ದು ವಲಸೆ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಲು ಪ್ರೇರೆಪಿಸುವಂತೆ ಈಗಾಗಲೇ ಗ್ರಾಮ ಪಂಚಾಯತ ಮಟ್ಟದಲ್ಲಿ ತಂಡಗಳನ್ನು ರಚಿಸಿ ಮತದಾನ ಪ್ರಕ್ರಿಯೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಕ್ರಿಕೆಟಿಗ ಸುನೀಲ ಜೋಶಿ ಹಾಗೂ ಕುಸ್ತಿ ಪಟುವಾದ ಪ್ರೇಮಾ ಹುಚ್ಚಣ್ಣವರ ಹಾಗೂ ಭೀಮಪ್ಪ ಇವರುಗಳನ್ನು ಜಿಲ್ಲಾ ಸ್ವೀಪ್ ಸಮಿತಿ ರಾಯಬಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.

ಎಂಭತ್ತು ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮತಪತ್ರದ ಸೌಲಭ್ಯವನ್ನು ಒದಗಿಸಲಾಗಿದ್ದು. ಚುನಾವಣಾ ದಿನಾಂಕ ಘೋಷಣೆಯಾದ ಐದು ದಿನಗಳ ಒಳಗಾಗಿ 12 ಡಿ ನಮೂನೆಯಲ್ಲಿ ಅಂಚೆ ಮತ ಚಲಾಯಿಸಲು ಇಚ್ಛಿಸುವವರು ಬಿ.ಎಲ್.ಓಗಳಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ ಅಂತಹ ಮತದಾರರಿಗೆ ಮತದಾನದ ದಿನದಂದು ಅಂಚೆ ಮತ ಚಲಾಯಿಸುವ ಸೌಲಭ್ಯ ಒದಗಿಸಲಾಗುವದು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ದಾಖಲಿಸಲು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು 1950 ಸಹಾಯವಾಣಿ ಸಂಖ್ಯೆಯಾಗಿದ್ದು ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ತಿಳಿಸಿದರು.

ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ ಮಾತನಾಡಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತ ಕಟ್ಟುನಿಟ್ಟಿನ ಪಾಲನೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಇಲ್ಲಿಯವರೆಗೆ ರೂ.62,99,000 ನಗದು, 397.83 ಲೀ ಮಧ್ಯ, 2.83 ಕೆ.ಜಿ.ಡ್ರಗ್ಸ, 4.046 ಕೆ.ಜಿ ಚಿನ್ನ ಸೇರಿದಂತೆ ಒಟ್ಟಾರೆಯಾಗಿ ವಶಪಡಿಸಿಕೊಳ್ಳಲಾದ ಸಾಮಗ್ರಿಗಳ ಮೌಲ್ಯ ರೂ. 2,48,54,224 ಆಗಿರುತ್ತದೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಜಿ.ಪಂ. ಮುಖ್ಯ ಯೋಜನಾಧಿಕಾರಿ ವಾಗೀಶ ಶಿವಾಚಾರ್ಯ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.