
ಮುದಗಲ್,ಏ.೨೪- ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಮುದಗಲ್ಲ ಪೊಲೀಸರ ತಂಡ ಸೇರಿ ಮುದಗಲ್ಲ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು.
ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ ತೊಡಗಿದ್ದರೆ, ಪ್ರಜಾತಂತ್ರದ ಹಬ್ಬವನ್ನು ಸುಗಮ, ಶಾಂತಿಯುತವಾಗಿ ನಡೆಸಲು ಚುನಾವಣಾ ಆಯೋಗವು ಸಹ ಸಿದ್ಧತೆ ಮಾಡಿಕೊಂಡಿದೆ.
ಚುನಾವಣೆಯಲ್ಲಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು ಅಣೆಯಾಗಿವೆ. ೨೫ ಭದ್ರತಾ ಸಿಬ್ಬಂದಿ ಸಶಸ್ತ್ರಗಳೊಂದಿಗೆ ಮುದಗಲ್ಲ ಪೋಲಿಸ್ ಠಾಣೆಯ ಮುಖಾಂತರ ಪ್ರಾರಂಭ ಗೊಂಡು ಮುದಗಲ್ಲ ಪ್ರಮುಖ ಬೀದಿಯಲ್ಲಿ ಪಥ ಸಂಚಲನ ನಡೆಯಿತು ಸಾರ್ವತ್ರಿಕ ಚುನಾವಣೆಯು ಕಾನೂನು ಸುವ್ಯವಸ್ಥೆ ಕಾಪಾಡಲು ಚುನಾವಣೆ ಪ್ರಕ್ರಿಯೆಯು ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು
ಇಲಾಖೆಯೊಂದಿಗೆ ಪ್ರತಿಯೊಬ್ಬ ಮತದಾರರು ಜನಪ್ರತಿನಿಧಿಗಳು ಸಾರ್ವಜನಿಕರು ಸಹಕಾರ ಅಗತ್ಯ ಜನರು ನಿರ್ಭೀತಿಯಿಂದ
ಮತದಾನ ಮಾಡಿ ಎಂಬ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಮುದಗಲ್ಲ ಪೋಲಿಸ್ ಠಾಣೆಯ ಪಿಎಸ್ಐ ಅಶೋಕ್ ಬೆವೂರ್ ಅವರು ಸೇರಿ ಪೋಲಿಸ್ ಸಿಬ್ಬಂದಿ ಗಳು ಹಾಗೂ ಪ್ಯಾರಾ ಮಿಲಿಟರಿ ತುಕಡಿಗಳು ಉಪಸ್ಥಿತರಿದ್ದರು.