ಮೈಸೂರು: ಏ.01:- ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಕಾರ್ಯಪ್ರವೃತ್ತವಾದ ಪೆÇೀಲೀಸ್ ಇಲಾಖೆ ತನ್ನ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಿತ್ತು.
ಮೈಸೂರಿನ ಪೆÇೀಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಜಿಲ್ಲಾ ಪೆÇೀಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್ ಚಾಲನೆ ನೀಡಿದರು.
ಮಹತ್ವದ ತರಬೇತಿ ಕಾರ್ಯಾಗಾರದಲ್ಲಿ ಮೈಸೂರು ನಗರ ಪೆÇೀಲೀಸ್ ಆಯುಕ್ತ ರಮೇಶ್ ಬಾನೋತ್, ಎಎಸ್ಪಿ ನಂದಿನಿ, ಡಿಸಿಪಿ ಮುತ್ತುರಾಜ್, ಸಿಐಡಿಯ ಕಾನೂನು ಸಲಹೆಗಾರ ಮಹೇಶ್ ವಿ ವೈದ್ಯ ಹಾಗೂ ಮೈಸೂರು ಜಿಲ್ಲೆಯ ಹಿರಿಯ ಪೆÇಲೀಸ್ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಮೈಸೂರು ನಗರ ಪೆÇೀಲೀಸ್ ಆಯುಕ್ತ ರಮೇಶ್ ಬಾನೋತ್, ಪ್ರತಿಯೊಂದು ಚುನಾವಣೆ ಸಂದರ್ಭದಲ್ಲಿಯೂ ಪೆÇಲೀಸರಿಗೆ ತರಬೇತಿ ಕಾರ್ಯಾಗಾರ ನಡೆಯುತ್ತದೆ. ಚುನಾವಣೆಯ ಸಂದರ್ಭದಲ್ಲಿ ಪೆÇೀಲೀಸರ ಪಾತ್ರ ಮಹತ್ವವಾಗಿದ್ದು, ಯಾವುದೇ ರೀತಿಯ ಅಕ್ರಮ ನಡೆಯದಂತೆ ಮುಂಜಾಗ್ರತೆ ವಹಿಸುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ನಮ್ಮ ಕೆಲಸ ಪಾರದರ್ಶಕವಾಗಿರಬೇಕಾಗುತ್ತದೆ ಎಂದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೆÇೀಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ ಎಂಟು ಚೆಕ್ ಪೆÇೀಸ್ಟ್ ಗಳಿದ್ದು, ಈ ಪೈಕಿ ನಗರ ವ್ಯಾಪ್ತಿಯಲ್ಲಿ ಮೂರು ಚೆಕ್ ಪೆÇೀಸ್ಟ್ ಗಳು ಬರುತ್ತವೆ. ಈಗಾಗಲೇ ಐವರು ರೌಡಿಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ. ಉಳಿದವರಿಗೆ ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಪರವಾನಗಿ ಮೇಲೆ ಇಟ್ಟುಕೊಂಡಿರುವ ಗನ್, ಬಂದೂಕುಗಳನ್ನು ಪೆÇಲೀಸ್ ಠಾಣೆಗೆ ನೀಡುವಂತೆ ಸೂಚಿಸಲಾಗಿದೆ. ತೀರಾ ಅಗತ್ಯ ಇರುವವರಿಗೆ ಸೂಕ್ತ ಕಾರಣ ನೀಡಿದರೆ ನಿಯಮ ಸಡಿಲಿಕೆ ಮಾಡಲಾಗುತ್ತದೆ. ಮಾತ್ರವಲ್ಲ, ಇಂದಿನಿಂದ ಐಪಿಎಲ್ ಆರಂಭವಾಗುತ್ತಿದ್ದು, ಬೆಟ್ಟಿಂಗ್ ದಂಧೆ ನಡೆಯದಂತೆ ಕಣ್ಣಿಡಲಾಗಿದೆ. ಈ ಹಿಂದೆ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದವರಿಗೆ ಬೆಟ್ಟಿಂಗ್ ನಲ್ಲಿ ಭಾಗಿಯಾಗದಂತೆ ವಾರ್ನಿಂಗ್ ನೀಡಲಾಗಿದೆ. ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ನಷ್ಟಕ್ಕೊಳಗಾಗುವರು ಸರಗಳ್ಳತನ, ಕಳ್ಳತನ, ಆತ್ಮಹತ್ಯೆ ಮೊದಲಾದ ಕೃತ್ಯಗಳಿಗೆ ಮುಂದಾಗುವ ಸಾಧ್ಯತೆ ಇದೆ. ಹಾಗಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
8 ಕಡೆ ಚೆಕ್ ಪೆÇೀಸ್ಟ್:
ಮೈಸೂರು ಜಿಲ್ಲೆಯ 8 ಕಡೆ ಚೆಕ್ ಪೆÇೀಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್ ಪೆÇೀಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್ ಗಳು ಬರಲಿದ್ಧು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ.
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ.
ಏಪ್ರಿಲ್ ಮೊದಲ ವಾರ ಪ್ಯಾರಾ ಮಿಲಿಟರಿ ಪಡೆ ಮೈಸೂರಿಗೆ ಆಗಮಿಸುತ್ತದೆ. ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಪಾರದರ್ಶಕ ಚುನಾವಣೆಗೆ ಪೆÇೀಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ. ಇದುವರೆಗೆ 46 ಲಕ್ಷ ನಗದು ವಶ ಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೆÇೀಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್ ತಿಳಿಸಿದರು.