ಜನರ ನಂಬಿಕೆ ಉಳಿಸಿಕೊಳ್ಳಲು ಸಚಿವ ಪ್ರಿಯಾಂಕ್ ಕರೆ

ಜನಸ್ನೇಹಿ ಪೆÇಲೀಸ್ ಅಭಿಯಾನ : ಕ್ಯೂ.ಆರ್. ಕೋಡ್ ಲೋಕಾರ್ಪಣೆ

ಕಲಬುರಗಿ,ಅ 14: ನಮ್ಮ ನಡೆ ನುಡಿಯಲ್ಲಿ ಪಾರದರ್ಶಕತೆ, ಕರ್ತವ್ಯಪ್ರಜ್ಞೆ ಮತ್ತು ನಮ್ಮ ವರ್ತನೆ ಸರಿ ಇದ್ದಾಗ ಮಾತ್ರ ಜನರು ನಮ್ಮನ್ನು ನಂಬುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.
ನಗರದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜನಸ್ನೇಹಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಪೆÇಲೀಸರು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಕೆಲ ಪೆÇಲೀಸರು ಅನಾರೋಗ್ಯಕ್ಕೂ ತುತ್ತಾಗಿದ್ದಾರೆ. ಒಂದೆಡೆ ಕರ್ತವ್ಯ, ಮತ್ತೊಂದೆಡೆ ವಿಐಪಿಗಳ ಭದ್ರತೆಯ ನಡುವೆಯೂ ಕೆಲಸ ಮಾಡಬೇಕಾಗುತ್ತದೆ. ಸರ್ಕಾರ ನಿಮ್ಮ ಸಮಸ್ಯೆಗಳಿಗೆ, ತೊಂದರೆಗಳ ಪರಿಹಾರಕ್ಕೆ ನಿಮ್ಮೊಂದಿಗೆ ಸದಾ ಇದೆ ಎಂದು ಅಭಯ ನೀಡಿದರು.
ಕಲಬುರಗಿ ಪೆÇಲೀಸ್ ವ್ಯವಸ್ಥೆಯನ್ನು ಜನ ಸ್ನೇಹಿ ಮಾಡುವತ್ತ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದ್ದು, ಈ ನಿಟ್ಟಿನಲ್ಲಿ “ಜನಸ್ನೇಹಿ ಪೆÇಲೀಸ್ ಅಭಿಯಾನ” ಜಾರಿಗೊಳಿಸಲಾಗುತ್ತಿದೆ. ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಜನಸಾಮಾನ್ಯರು ಪೆÇಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳ ವರ್ತನೆ ಕುರಿತಂತೆ ಕ್ಯೂ.ಆರ್. ಕೋಡ್ ಮೂಲಕ ದಾಖಲಿಸಬಹುದಾಗಿದೆ. ಈ ಕೋಡ್ ಅಳವಡಿಕೆಯ ಹಿಂದೆ ನಿಮ್ಮ ಕರ್ತವ್ಯ ನಿರ್ವಹಣೆ ಕಣ್ಗಾವಲು ಜೊತೆಗೆ ಜನಸಾಮಾನ್ಯರ ಹಿತಾಸಕ್ತಿ ಕಾಪಾಡುವ ಉದ್ದೇಶವಿದೆ ಎಂದರು.
ನಗರ ಹಾಗೂ ಜಿಲ್ಲೆಯ ಎಲ್ಲ ಪೆÇಲೀಸ್ ಠಾಣೆ ಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕರು ಉಪಯೋಗಿಸುವ ದ್ವಾರಗಳ ಬಳಿ ಕ್ಯೂ.ಆರ್.ಕೋಡ್ ಲಗತ್ತಿಸಲಾಗುವುದು. ಅಲ್ಲದೇ ಜಿಲ್ಲೆಯ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ಕೂಡ ಇಲಾಖೆ ವತಿಯಿಂದ ಕೋಡ್ ಲಗತ್ತಿಸಲಾಗುವುದು ಎಂದು ವಿವರಿಸಿದರು.
ಸಮಸ್ಯೆಗಳ ಪರಿಹಾರಕ್ಕಾಗಿ, ನ್ಯಾಯಕ್ಕಾಗಿ ದೂರು ಸಲ್ಲಿಸಲು, ವ್ಯಾಜ್ಯ ಪರಿಹಾರಕ್ಕಾಗಿ ಪೆÇಲೀಸ್ ಠಾಣೆಗೆ ಬರುವ ಸಾರ್ವಜನಿಕರೊಡನೆ ಜನಸ್ನೇಹಿಯಾಗಿ ವರ್ತಿಸುವುದು ಪೆÇಲೀಸರ ಆದ್ಯ ಕರ್ತವ್ಯವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಪೆÇಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ದಿಕ್ಕಿನಲ್ಲಿ “ಜನಸ್ನೇಹಿ ಪೆÇಲೀಸ್ ಅಭಿಯಾನ ” ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಜನಸಾಮಾನ್ಯರೊಂದಿಗೆ ಪೆÇಲೀಸರು ಉತ್ತಮ ಭಾಂದವ್ಯ ಹೊಂದಿದಾಗ ಮಾತ್ರ ಸಮಾಜದಲ್ಲಿ ಏನು ನಡೆಯುತ್ತಿದೆ ಎನ್ನುವ ಮಾಹಿತಿ ಸಿಗುತ್ತದೆ ಎಂದ ಸಚಿವರು, ಜನರ ನಡುವೆ ನಡೆಯುವ ಜಗಳ ಮನಸ್ತಾಪ ಮತ್ತು ಕೋಮುಗಲಭೆಯನ್ನು ತಡೆಯಲು ಗುಪ್ತಚರ ಇಲಾಖೆಗೆ ಇದು ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೆÇಲೀಸರು ಮತ್ತಷ್ಟು ಜನಸ್ನೇಹಿಯಾಗುವ ಅನಿವಾರ್ಯತೆ ಇದೆ ಎಂದು ಒತ್ತಿ ಹೇಳಿದರು.ಬೆಂಗಳೂರಿನಲ್ಲಿ ಈ ತರಹದ ಕೋಡ್ ಅವಳವಡಿಕೆ ಕಾರ್ಯ ಕೈಗೊಳ್ಳಲಾಗಿದೆ. ಆ ನಂತರ ಕಲಬುರಗಿಯಲ್ಲಿ ಈ ಕೋಡ್ ಅಳವಡಿಸಲಾಗುತ್ತಿದೆ ಎಂದರು.
ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರು, ಈಶಾನ್ಯ ವಲಯ ಡಿಐಜಿ ಅನುಪಮ್ ಅಗರವಾಲ್, ನಗರ ಪೆÇಲೀಸ್ ಆಯುಕ್ತ ಆರ್. ಚೇತನ, ಎಸ್ಪಿ ಇಶಾಪಂತ್, ಡಿಸಿಪಿ ಅಡ್ಡೂರು ಶ್ರೀನಿವಾಸಲು , ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಓ ಭವರ್ ಕುಮಾರ್ ಮೀನಾ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.


ಸಚಿವರ ಕಚೇರಿಯಲ್ಲೂ ಕ್ಯೂ.ಆರ್.ಕೋಡ್
ಜನರು ತಮ್ಮನ್ನು ಭೇಟಿ ಮಾಡಲು ಅನುಕೂಲ ಆಗುವಂತೆ ತೆರೆದಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲೂ ಕ್ಯೂ.ಆರ್. ಕೋಡ್ ಅಳವಡಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಈ ಕ್ಯೂ.ಆರ್.ಕೋಡ್ ಬಳಸಿ ಜನ ಸಾಮಾನ್ಯರು ತಮ್ಮ ವಿರುದ್ಧವೂ ದೂರು ಸಲ್ಲಿಸಬಹುದಾಗಿದೆ ಖರ್ಗೆ ನುಡಿದರು.