ಜಿಲ್ಲಾಡಳಿತದಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ


ಬಳ್ಳಾರಿ,ಏ.23- ವಿಶ್ವಗುರು ಜಗಜ್ಯೋತಿ  ಬಸವೇಶ್ವರ ರ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ  ನಗರದ ಗವಿಯಪ್ಪ ವೃತ್ತದಲ್ಲಿನ  ಬಸವೇಶ್ವರರ ಪುತ್ಥಳಿಗೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಟಿ ರುದ್ರಪ್ಪ, ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಮೊದಲಾದವರು
ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.