ವಿಜಯಪುರ: ಮಾ.29:ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಅವರು ಸೋಮವಾರ ರಾತ್ರಿ ದಿಢೀರವಾಗಿ ಜಿಲ್ಲೆಯ ವಿವಿಧ ಚೆಕ್ಪೋಸ್ಟ್ಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಮಧ್ಯ ರಾತ್ರಿ ನಿಡಗುಂದಿ ಯಲಗೂರು ಕ್ರಾಸಿನಲ್ಲಿ ಸ್ಥಾಪಿಸಿರುವ ಅಂತರ್ ಜಿಲ್ಲಾ ಚೆಕ್ ಪೆÇೀಸ್ಟ ಭೇಟಿ ನೀಡಿದ ಅವರು, ಚೆಕ್ಪೋಸ್ಟ್ಗಳ ಮೂಲಕ ಹಾದು ಹೋಗುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಬೇಕು. ಚುನಾವಣೆ ಹಿನ್ನಲೆ ವಾಹನ ತಪಾಸಣೆ ನಡೆಸುತ್ತಿರುವ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಬೇಕು, ಸಾರ್ವಜನಿಕರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಚುನಾವಣಾ ಕರ್ತವ್ಯದಲ್ಲಿ ಲೋಪಕ್ಕೆ ಆಸ್ಪದ ನೀಡಬಾರದು. ಪರಸ್ಪರ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅಕ್ರಮ ಕಂಡು ಬಂದ ಹಿನ್ನಲೆಲ್ಲಿ ಕಾನೂನು ರಿತ್ಯ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.
ಈಗಾಗಲೇ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 2, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ 1, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 2, ಬಬಲೇಶ್ವರ ಮತಕ್ಷೇತ್ರದಲ್ಲಿ 7, ವಿಜಯಪುರ ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ 3, ನಾಗಠಾಣ ಮತಕ್ಷೇತ್ರದಲ್ಲಿ 7, ಇಂಡಿ ಮತಕ್ಷೇತ್ರದಲ್ಲಿ 2 ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ 3 ಸೇರಿದಂತೆ ಒಟ್ಟು 27 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ಚುನಾವಣಾ ಅಕ್ರಮದ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಈ ಸಂದರ್ಭದಲ್ಲಿ ನಿಡಗುಂದಿ ಠಾಣಾಧಿಕಾರಿ ಹಾಗೂ ಚೆಕ್ ಪೆÇೀಸ್ಟ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪವಿಭಾಗಾಧಿಕಾರಿಗಳಿಂದ ಪರಿಶೀಲನೆ : ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಸೋಮವಾರ ರಾತ್ರಿ ಸಿಂದಗಿ ನಾಕಾ ಸೇರಿದಂತೆ ವಿವಿಧ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು