ಚಿಕ್ಕಬಳ್ಳಾಪುರ.ಸೆ೨೬:ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಆಯೋಜಿಸಿದೆ. ಪ್ರತಿ ೧೫ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ ಸಾರ್ವಜನಿಕರು ಅಲ್ಲಿಯೇ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡು ಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಮಾಡಿದರು.
ಶಾಸಕ ಪ್ರದೀಪ್ ಈಶ್ವರ್ ಅವರು ಮಾತನಾಡಿ, ಮುಖ್ಯಮಂತ್ರಿಗಳ ದೂರದೃಷ್ಟಿಯ ಫಲವಾಗಿ ಜಿಲ್ಲಾ ಕೇಂದ್ರದಲ್ಲಿ “ಜನತಾ ದರ್ಶನ” ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಸಚಿವರ ಸಮ್ಮುಖದಲ್ಲಿ ಆಯೋಜನೆ ಮಾಡಿರುವ ಈ ಕಾರ್ಯಕ್ರಮದ ಸವಲತ್ತುಗಳನ್ನು ಜನರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
೨೩೨ ಅರ್ಜಿ ಸ್ವೀಕಾರ
ಇದೆ ವೇಳೆ ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು,ಇಂದು ನಡೆದ ಜನತಾ ದರ್ಶನದಲ್ಲಿ ವಿವಿಧ ಇಲಾಖೆಗಳಿಂದ ಒಟ್ಟು ೬ ಕೌಂಟರ್ ಗಳನ್ನು ತೆರೆಯಲಾಗಿತ್ತು. ಎಲ್ಲಾ ಕೌಂಟರ್ ಗಳಿಂದ ಒಟ್ಟು ೨೩೨ ಅಹವಾಲು(ಸಂಜೆ ೫.೩೦ ರ ವೇಳೆಗೆ) ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಹೆಚ್ಚಾಗಿ ಕಂದಾಯ ಇಲಾಖೆಯಿಂದಲೆ ಶೇ ೩೦ ರಷ್ಟು ಅಂದರೆ ೬೫ಕ್ಕೂ ಹೆಚ್ಚು ಅರ್ಜಿಗಳು ಸ್ವಿಕೃತವಾಗಿವೆ. ಕಂದಾಯ ಇಲಾಖೆಯ ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂದಿಸಿದಂತೆ ೩೨ ಅರ್ಜಿಗಳು ಸ್ವಿಕೃತವಾಗಿವೆ ಉಳಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೌರಾಡಳಿತ, ಬೆಸ್ಕಾಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹೀಗೆ ವಿವಿಧ ಇಲಾಖೆಗಳಿಂದ ಅರ್ಜಿಗಳು ಸ್ವಿಕೃತವಾಗಿವೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ಮಂಜುಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಅಪರ ಜಿಲ್ಲಾಧಿಕಾರಿ ಡಾ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಅಶ್ವಿನ್,ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ ಎನ್ ಭಾಸ್ಕರ್,ತಹಸೀಲ್ದಾರ್ ಅನಿಲ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮುಂತಾದವರು ಹಾಜರಿದ್ದು.