ಜೂನಿಯರ್ ರೆಡ್‍ಕ್ರಾಸ್ ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣಾ ಕಾರ್ಯಕ್ರಮ


ಬಳ್ಳಾರಿ,ಜೂ.20: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರಾಜ್ಯ ಶಾಖೆಯಿಂದ ನೀಡಲಾದ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ವಿತರಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಉಪಾಧ್ಯಕ್ಷರು ಆಗಿರುವ ರಾಹುಲ್ ಶರಣಪ್ಪ ಸಂಕನೂರು ಅವರು ಜಿಪಂ ಸಭಾಂಗಣದಲ್ಲಿ ಸೋಮವಾರ ಸಾಂಕೇತಿಕವಾಗಿ ಉದ್ಘಾಟಿಸಿದರು.
ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಜೂನಿಯರ್ ರೆಡ್‍ಕ್ರಾಸ್ ಸಂಸ್ಥೆಯಲ್ಲಿ ನೊಂದಣಿಯಾದ 156 ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮತ್ತು ನಮ್ಮ ಸರ್ವ್ ಸ್ವಯಂ ಸೇವಕರ ತಂಡವು ಪ್ರತಿ ಶಾಲೆಗಳಿಗೆ ತೆರಳಿ ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಶಾಲೆಯ ಪ್ರಾಂಶುಪಾಲರ ಮೂಲಕ ಹಸ್ತಾಂತರಿಸಲಾಗುತ್ತದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಅವರು ಹೇಳಿದರು.
ಭಾರತಿಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಉಪ ಸಭಾಪತಿ ಡಾ.ಎಸ್.ಜೆ.ವಿ.ಮಹಿಪಾಲ್, ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಈ.ಸಿ ಸದಸ್ಯರಾದ ಕಪ್ಪಗಲ್ಲು ವೀರೇಶ್, ಪಿ.ವಾಸು, ಜೆ.ಆರ್.ಸಿ ಕೋ-ಆರ್ಡಿನೇಟರ್ ಮಹಾಂತೇಶ್, ಎಂ.ವಲಿ ಬಾಷಾ, ರಾಮಾಂಜಿನೇಯಲು ಹಾಗೂ ಇತರರು ಇದ್ದರು.