ಡೇಟಿಂಗ್ ಆಪ್‌ನಲ್ಲಿ ವಂಚನೆ ಖದೀಮನ ಸೆರೆ

ಬೆಂಗಳೂರು,ಜೂ.೧೦- ಡೇಟಿಂಗ್ ಆಪ್ ಮೂಲಕ ಯುವತಿಗೆ ವಂಚಿಸಿದ್ದ ಖತರ್ನಾಕ್ ಖದೀಮನೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುದಾಸಿರ್ ಬಂಧಿತ ಆರೋಪಿಗಳಾಗಿದ್ದಾನೆ.ಹಿಂದೂ ಯುವಕನ ಹೆಸರಲ್ಲಿ ಆರೋಪಿಯು ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಆಪ್‌ನಲ್ಲಿ ಸಂಗಾತಿ ಹುಡುಕುತ್ತಿದ್ದ ಯುವತಿಗೆ ಮೆಸೇಜ್ ಕಳಿಸಿದ್ದ.
ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದನು. ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ ಆರೋಪಿ ಮುದಾಸಿರ್, ನಂತರ ಯುವತಿ ಭೇಟಿ ವೇಳೆ ಆತ ಹಿಂದೂ ಅಲ್ಲ ಎಂಬುದು ಬೆಳಕಿಗೆ ಬಂದಿದೆ.
ಜೊತೆಗೆ ತಾಯಿಗೆ ಹುಷಾರಿಲ್ಲವೆಂದು ಯುವತಿ ಬಳಿ ೧ ಲಕ್ಷ ಹಣವನ್ನ ಪಡೆದು ಬಳಿಕ ತಾಯಿ ಮೃತಪಟ್ಟಿದ್ದಾರೆ ಎಂದು ಸುಳ್ಳಿನ ಕಥೆ ಕಟ್ಟಿದ್ದಾನೆ.
ಕೊನೆಗೆ ಸೋದರನನ್ನ ನೋಡಲು ದುಬೈಗೆ ಹೋಗಿ ಬರುತ್ತೆನೆಂದು ಫೋನ್ ಸ್ಪಿಚ್ ಆಫ್ ಮಾಡಿ, ಬಳಿಕ ಮುದಾಸಿರ್‌ನನ್ನು ಪತ್ತೆ ಹಚ್ಚಿದ ಯುವತಿಗೆ ಡಬ್ಬಲ್ ಡಬ್ಬಲ್ ಶಾಕ್ ಎದುರಾಗಿತ್ತು.
ಆತ ಅನಿರುದ್ದ್ ಅಲ್ಲ ಮುದಾಸಿರ್ ಎನ್ನುವುದರ ಜೊತೆಗೆ ಮುದಾಸಿರ್‌ಗೆ ಮತ್ತೊಂದು ಮದುವೆಯಾಗಿ ಹೆಂಡತಿ ಮಕ್ಕಳು ಇರುವುದು ಇದರಿಂದ ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರು ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿ ಇದೀಗ ಜೈಲಿಗಟ್ಟಿದ್ದಾರೆ.
ಆನ್‌ಲೈನ್ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದೇ ಮೊದಲಲ್ಲ, ಸಾಕಷ್ಟು ಜಾಗೃತಿ ಮೂಡಿಸಿದರೂ ವಂಚಕರು ಹೊಸ ಮಾರ್ಗಗಳನ್ನು ಬಳಸಿ ಹಣ ಲೂಡಿ ಮಾಡುತ್ತಿದ್ದಾರೆ. ಅದರಂತೆ ಡೇಟಿಂಗ್ ಆಪ್ ಮೂಲಕ ಪರಿಚಯವಾದ ಅಪರಿಚಿತ ವಂಚಕನ ಬಲೆಗೆ ಬಿದ್ದ ಯುವತಿಯೊಬ್ಬರು ೩.೧೮ ಲಕ್ಷ ರೂ. ಕಳೆದುಕೊಂಡಿದ್ದರು. ಈ ಕುರಿತು ಮೋಸ ಹೋದ ೩೫ ವರ್ಷದ ಯುವತಿ ವೈಟ್‌ಫೀಲ್ಡ್ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದಿತ್ಯ ಹೆಸರಿನ ವಂಚಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ದೂರುದಾರೆಗೆ ಕೆಲ ತಿಂಗಳ ಹಿಂದೆ ಡೇಟಿಂಗ್ ಆಪ್‌ನಲ್ಲಿ ಆದಿತ್ಯ ಎಂಬಾತ ಪರಿಚಯವಾಗಿದ್ದ. ತಾನು ಲಂಡನ್‌ನಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದ. ಬಳಿಕ ಇಂಟರ್ನೆಟ್ ವಾಟ್ಸ್‌ಆಪ್ ಕಾಲ್‌ನಲ್ಲಿ ಸಂಪರ್ಕ ಸಾಧಿಸಿದ್ದು, ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಇನ್ನು ಇಂತಹ ಪ್ರಕರಣಗಳು ಅದೆಷ್ಟೋ ಬೆಳಕಿಗೆ ಬಂದಿದ್ದರು, ಮೋಸ ಹೋಗುವವರ ಸಂಖ್ಯೆ ಮಾತ್ರ ಕಡಿಮೆ ಆಗುತ್ತಿಲ್ಲ.