
“ವೇದ” ಚಿತ್ರದ ಯಶಸ್ಸಿನ ಬೆನ್ನಲ್ಲೇ ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರು.
“ಮಜಾಟಾಕೀಸ್” ಹಾಗೂ ಸೃಜನ್ ಲೋಕೇಶ್ ಅಭಿನಯದ “ಎಲ್ಲಿದೆ ಇಲ್ಲಿತನಕ” ಚಿತ್ರದ ನಿರ್ದೇಶಕ ತೇಜಸ್ವಿ ಕೆ ನಾಗ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.
ನಿರ್ದೇಶಕ ತೇಜಸ್ವಿ ಕೆ ನಾಗ್ ಮಾತನಾಡಿ, ಶಿವಣ್ಣ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜಕುಮಾರ್ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.