
ವಿಭಿನ್ನ ಶೀರ್ಷಿಕೆ “ಕಣಂಜಾರು” ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಮೋಷನ್ ಪೋಸ್ಟರ್ ಮತ್ತು ಶೀರ್ಷಿಕೆ ಬಿಡುಗಡೆಯಾಗಿದ್ದು ಸದ್ಯದಲ್ಲಿಯೇ ಟೀಸರ್ ಬಿಡುಗಡೆ ಮಾಡಲು ತಂಡ ಮುಂದಾಗಿದೆ. ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ ದಿ ಡಾರ್ಕ್ ಸೈಡ್ ಆಫ್ ” ಕಣಂಜಾರು” ಚಿತ್ರದಲ್ಲಿ ಬಾಲಚಂದ್ರ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.
ಕಾರ್ಕಳ, ಉಡುಪಿ, ಹೊನ್ನಾವರ ಸೇರಿದಂತೆ ಮತ್ತಿತರ ಕಡೆ 55 ರಿಂದ 60 ದಿನಗಳ ಕಾಲ ಚಿತ್ರೀಕಣ ಮಾಡಲಾಗಿದೆ. ಕಾರ್ಕಳ ಬಳಿಯ ಊರಿನ ಹೆಸರು ಕಣಂಜಾರು. ಹೀಗಾಗಿ ಆ ಹೆಸರು ಇಟ್ಟಿದ್ದೇವೆ. ಅದು ಯಾಕೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ಮಾಪಕರೂ ಆಗಿರುವ ಆರ್.ಬಾಲಚಂದ್ರ.
ಈ ಹಿಂದೆ ಮಹಾನುಭಾವರು ಚಿತ್ರದಲ್ಲಿ ನಾಯಕ ಜೊತೆಗೆ ನಿರ್ಮಾಣ ಮಾಡಿದ್ದೆ, ಇದೊಂದು ಆಸಕ್ತಿ ಮತ್ತು ಕುತೂಹಲಕಾರಿ ಸಂಗತಿಯ ಕಥೆ ಹೊಂದಿದ್ದರಿಂದ ನಿರ್ದೇಶನ ಕೂಡ ಮಾಡಿದ್ದೇನೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಅಂತಿಮ ಹಂತದಲ್ಲಿದೆ ಎಂದಿದ್ದಾರೆ.
ಚಿತ್ರದಲ್ಲಿ ಬಾಲಚಂದ್ರ, ಅಪೂರ್ವ, ಶರ್ಮಿತಾ ಗೌಡ,ಹಿರಿಯ ನಟ ರಾಮಕೃಷ್ಣ, ಶ್ರೀಧರ್ ಹಾಗು ಮೇಘ ಸೇರಿದಂತೆ ಹೊಸ ಕಲಾವಿದರಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಮಂಜುನಾಥ್ ಹೆಗ್ಡೆ ಕ್ಯಾಮರ ಚಿತ್ರಕ್ಕಿದೆ.