ದರ್ಶನಾಪುರ ಮತ್ತು ರಾಜಾ ವೆಂಕಟಪ್ಪ ನಾಯಕ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಾಯ

ಶಹಾಪುರ:ಮೇ.16: ನೂತನ ಶಾಸಕರಾಗಿ ಐದನೇ ಬಾರಿ ಆಯ್ಕೆಯಾಗಿರುವ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಸಚಿವರನ್ನಾಗಿ ಮಾಡಬೇಕು ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾದಗಿರಿ ಉಸ್ತುವಾರಿ ಸಚಿವರನ್ನಾಗಿ ನೇಮಿಸ ಬೇಕು ಎಂದು ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ಶ್ರೀ ಮಹೇಶ ಹುಜರಾತಿ ಒತ್ತಾಯಿಸಿದ್ದಾರೆ.
ಈ ಮೂಲಕ ಪ್ರಕಟಣೆ ಯಲ್ಲಿ ತಿಳಿಸಿರುವ ಅವರು ರಾಜ್ಯ ನಾಯಕರಲ್ಲಿ ನಂಬಿಕೆಯುಳ್ಳವರಾಗಿದ್ದು ಈ ಬಾರಿ 26,027 ಮತಗಳ ಅಂತರದಲ್ಲಿ ಜಯಗಳಿಸಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಕಾಂಗ್ರೇಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಎಲ್ಲಾ ವರ್ಗ ಮತ್ತು ಸಮುದಾಯದ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಸರ್ವ ಜನಾಂಗಗಳ ಅಭಿವೃದ್ಧಿ ಬಯಸುವ ಅಪರೂಪದ ವ್ಯಕ್ತಿತ್ವ ಅವರದ್ದಾಗಿದ್ದು ಮಂತ್ರಿ ಸ್ಥಾನ ನೀಡಬೇಕು ಮತ್ತು ಸುರಪುರ ರಾಜಾ ವೆಂಕಟಪ್ಪ ನಾಯಕ ಅವರು ಕೂಡಾ 25000 ಸಾವಿರ ಮತಗಳಿಂದ ಜಯಭೇರಿ ಬಾರಿಸಿದ್ದಾರೆ ಹಿರಿಯ ಶಾಸಕರು ಅಪಾರವಾದ ಅನುಭವ ಹೊಂದಿದ್ದಾರೆ ಈಬಾರಿ ಶಹಾಪುರ ಮತ್ತು ಸುರಪುರ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು
ಎಂದು ಮಾಜಿ ತಾಲೂಕ ಪಂಚಾಯತ ಸದಸ್ಯರಾದ ಮಹೇಶ ಹುಜರಾತಿ ಮನವಿ ಮಾಡಿದ್ದಾರೆ.