ದಾವಣಗೆರೆ ಸಮೀಪದ ಶಾಮನೂರಿನ ಶ್ರೀರಾಮ ದೇವಸ್ಥಾನ, ಈಶ್ವರ ಸ್ವಾಮಿ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಕುಟುಂಬದಿಂದ ಭಕ್ತರಿಗೆ ಮಾಡಿದ್ದ ಪ್ರಸಾದ ವ್ಯವಸ್ಥೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.