ನನ್ನ ಹತ್ಯೆಗೆ ಸಂಚು: ಈಶ್ವರಪ್ಪ ಸ್ಫೋಟಕ ಹೇಳಿಕೆ

ಬಳ್ಳಾರಿ, ಏ. ೧೪ : ತಮ್ಮನ್ನು ಕೊಲೆ ಮಾಡಲು ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಬಳ್ಳಾರಿ ನಗರದಲ್ಲಿರುವ ತಮ್ಮ ಮನೆ ದೇವರಿಗೆ ಕುಟುಂಬ ಸದಸ್ಯರೊಂದಿಗೆ ಬಂದ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಹಿಂಡಲಗ ಜೈಲಿನಲ್ಲಿದ್ದ ಜಯೇಶ್ ಪುಜಾರಿ ಅಲಿಯಾಸ್ ಶಾಹಿದ್ ಶೇಖ್ ತಮ್ಮ ಕೊಲೆಗೆ ಸ್ಕೆಚ್ ಹಾಕಿರೋ ವಿಚಾರ ಗೊತ್ತಾಗಿದೆ. ಈ ವ್ಯಕ್ತಿಗಳು ಗಡ್ಕರಿ ಅವರಿಗೆ ಬೆದರಿಕೆ ಹಾಕಿದರು. ನನ್ನ ಕೊಲೆಗೂ ಪಿತೂರಿ ನಡೆಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಈ ಆರೋಪಿಯ ಹಿಂದೆ ಪಿಎಫ್‌ಐ ನವರ ಬೆಂಬಲ ಇದೆ. ನನಗೆ ಹೆಚ್ಚಿನ ಭದ್ರತೆ ನೀಡಿ ಎಂದು ಅರ್ಜಿ ಹಾಕಲ್ಲ ಎಂದು ತಿಳಿಸಿದರು.ಈ ಹಿಂದೆಯೂ ಕೊಲೆ ಬೆದರಿಕೆ ಬಗ್ಗೆ ಕರೆ ಬಂದಿತ್ತು. ಈವಿಚಾರ ಅಧಿವೇಶನದಲ್ಲಿಯೇ ಹೇಳಿದ್ದೆ ಆಗ ಕಾಂಗ್ರೆಸ್ ಸರ್ಕಾರವಿತ್ತು ನನಗೆ ಭದ್ರತೆ ನೀಡಿದ್ದರು ಎಂದು ತಿಳಿಸಿದರು.ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಯಾವುದೇ ಬೆದರಿಕೆಗೆ ಬಗ್ಗಲ್ಲ. ಹಿಂದುತ್ವ ವಾದಿಗಳಿಗೆ ಬೆದರಿಕೆ ಸಾಮಾನ್ಯ ಆದರೆ ನನ್ನ ನಿಲುವು ಬದಲಾಯಿಸಲ್ಲ. ಪೊಲೀಸರು ನನಗೆ ನೀಡಿದ ಮಾಹಿತಿ ಬಹಿರಂಗ ಪಡಿಸಿದ್ದೇನೆ ಎಂದು ಹೇಳಿದರು.
ಚುನಾವಣಾ ರಾಜಕೀಯ ಬೇಡ:
ಪಕ್ಷದ ರಾಷ್ಟ್ರೀಯ ಮುಖಂಡ ಧರ್ಮೇಂದ್ರ ಪ್ರಧಾನ ಕರೆ ಮಾಡಿ ಚುನಾವಣಾ ರಾಜಕೀಯ ಬೇಡ ಎಂದು ಹೇಳಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಂತೆ ಅವರು ಹೇಳಿದಂತೆ ಚುನಾವಣಾ ನಿವೃತ್ತಿ ಪತ್ರ ಬರೆದು ಕಳುಹಿಸಿದ್ದೇನೆ.
ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಜಗದೀಶ್ ಶೆಟ್ಟರ್ ಲಾಬಿ ವಿಚಾರ ನನಗೆ ಸಂಬಂಧ ಇಲ್ಲ ನಾನು ಪಕ್ಷ ಹೇಳಿದಂತೆ ಕೇಳುತ್ತೇನೆ. ಕಾಲ ಕಾಲಕ್ಕೆ ಪಕ್ಷ ಹೇಳಿದಂತೆ ಕೇಳಿಕೊಂಡು ಬಂದಿದ್ದೇನೆಂದರು.
ಕೊಟ್ಟರೆ ಸಂತೋಷ:
ಮಗನಿಗೆ ಟಿಕೆಟ್ ಕೊಟ್ಟರೇ ಸಂತೋಷ. ಬೂತ್ ಮಟ್ಟದ ಕಾರ್ಯಕರ್ತನಿಂದ ಉಪಮುಖ್ಯಮಂತ್ರಿ ಮಾಡಿದ್ದಾರೆ.
ಇದೀಗ ಪಕ್ಷದ ಕೆಲಸ ಮಾಡು ಎಂದಿದ್ದಾರೆ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರೋಕೆ ಯಾವ ಕೆಲಸ ಮಾಡೋದಕ್ಕೆ ಸಿದ್ದ.
ಆಕಾಂಕ್ಷಿಗಳು ಹೆಚ್ಚಾಗಿರೋದು ನೋಡಿದ್ರೇ ಪಕ್ಷದ ವರ್ಚಸ್ಸು ಹೆಚ್ಚಾಗುವುದು ಗೊತ್ತಾಗುತ್ತದೆ. ಟಿಕೆಟ್‌ಗಾಗಿ ಇದೀಗ ಹಠಕ್ಕೆ ಬಿದ್ದಿದ್ದಾರೆ. ಹಿಂದೆ ಪಕ್ಷಕ್ಕೆ ಕ್ಯಾಂಡೇಟ್ ಇರಲಿಲ್ಲ. ರಾಷ್ಟ್ರೀಯ ನಾಯಕರು ಯೋಚನೆ ಮಾಡಿ ತೀರ್ಮಾನ ಮಾಡ್ತಾರೆ. ಬಿಜೆಪಿ ಬಿಟ್ಟು ಹೋಗ್ತಾರೆ ಅಂದ್ರೇ ಅವರು ಬಿಜೆಪಿ ಪಕ್ಷಕ್ಕೆ ಅನ್ಫಿಟ್ (ಯೋಗ್ಯರಲ್ಲ) ಎಂದು ಪರೋಕ್ಷವಾಗಿ ಸವದಿಗೆ ಟಾಂಗ್ ಈಶ್ವರಪ್ಪ ಟಾಂಗ್ ನೀಡಿದರು.