ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ: ಪ್ರತಿಜ್ಞಾವಿಧಿ ಬೋಧನೆ

ರಾಯಚೂರು,ಏ.೧೭- ಮುಂದಿನ ತಂಗಳು ಮೇ ೧೦ ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಸಾರ್ವತ್ರಕ ಚುನಾವಣೆಯಲ್ಲಿ ಮತದಾರರ ಪಟ್ಟಯಲ್ಲಿ ಹೆಸರು ಇರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಿರವಾರ ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಶರ್ಫುನೀಸಾ ಬೇಗಂ ಅವರು ಕರೆ ನೀಡದರು.
ಅವರು ರಾಯಚೂರು ಜಿಲ್ಲೆಯ,ಸಿರವಾರ ತಾಲೂಕಿನ ಗಣದಿನ್ನಿ ಗ್ರಾಮ ಪಂಚಾಯತಿಯ ಸಿಂಗಡದಿನ್ನಿ, ಬೇವಿನೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ, ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆಯಡಿ ಮತದಾರರ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.
ಪ್ರತಿಯೊಬ್ಬ ಮತದಾರರು ಮತದಾನ ಮಾಡುವ ಮೂಲಕ ರಾಯಚೂರು ಜಿಲ್ಲೆಯಲ್ಲಿ ಮತದಾನ ಪ್ರತಿಶತ ಹೆಚ್ಚಳಕ್ಕೆ ಸಹಕಾರ ನೀಡಬೇಕು. ಸ್ವಿಪ್ ಚಟುವಟಿಕೆಯಡಿಯಲ್ಲ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರು ಮತದಾನದಿಂದ ವಂಚತರಾಗಬಾರದು, ಈ ವರ್ಷ ಚುನಾವಣಾ ಆಯೋಗವು ಮನೆಯಲ್ಲಿಯೇ ಇದ್ದು ಮತದಾನ ಮಾಡುವ ಅವಕಾಶವನ್ನು ವಿಶೇಷ ಚೇತನರಿಗೆ ಹಾಗೂ ೮೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡಬೇಕು. ವಿಶೇಷ ಚೇತನರು, ಹಿರಿಯ ನಾಗರಿಕರು ಮತದಾನ ಮಾಡುವಂತೆ ಕರೆ ನೀಡಿದರು.
ಏಪ್ರಿಲ್ ೧ ರಿಂದ ನರೇಗಾ ಕೂಲಿ ಮೊತ್ತವು ೩೦೯ ರಿಂದ ೩೧೬ ಕ್ಕೆ ಹೆಚ್ಚಿಸಲಾಗಿದೆ. ಯೋಜನೆಯಡಿ ಸಿಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆಯಲು ಮಾಹಿತಿ ತಿಳಿಸಲಾಯಿತು. ಎಲ್ಲಾ ಕೂಲಿಕಾರರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧನೆ ಮಾಡಿಸಲಾಯಿತು ಐಇಸಿ ಸಂಯೋಜಕ ರಾಜೇಂದ್ರ ಕುಮಾರ ಎಲ್ಲಾ ಕೂಲಿಕಾರರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿನೆ ಮಾಡಿಸಿದರು.
ತಾಂತ್ರಿಕ ಸಹಾಯಕರು, ಜಿಕೆಎಂ, ಬಿಎಫ್ಟಿ, ಮೇಟ್, ಕೂಲಿಕಾರರು ಈ ಸಂದರ್ಭದಲ್ಲಿ ಇದ್ದರು.